ಬ್ರೇಕಿಂಗ್ ನ್ಯೂಸ್
07-02-26 05:09 pm HK News Desk ಕರ್ನಾಟಕ
ಗದಗ, ಫೆ.7: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳ ಓದಿಗೆ ಅನುವಾಗುವಂತೆ ಗದಗ ಜಿಲ್ಲೆಯ ರೋಣ ಮತ್ತು ಗಜೇಂದ್ರಗಡ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಮೊಬೈಲ್ ಫೋನ್ ಮತ್ತು ಟಿವಿಗಳನ್ನು ಸ್ವಿಚ್ ಆಫ್ ಮಾಡುವಂತೆ ಹಾಗೂ ಟ್ರ್ಯಾಕ್ಟರ್ಗಳಲ್ಲಿ ಜೋರಾಗಿ ಸಂಗೀತ ಹಾಕಿಕೊಂಡು ಸಂಚರಿಸುವುದನ್ನು ನಿಷೇಧಿಸಿ ತಾಲೂಕು ಪಂಚಾಯಿತಿ ಆದೇಶ ಹೊರಡಿಸಿದೆ. ಈ ಕುರಿತು ಡಂಗುರ ಸಾರುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಶಾಂತ ಅಧ್ಯಯನ ವಾತಾವರಣ ಒದಗಿಸಿ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಸುಧಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ರೋಣ ಹಾಗೂ ಗಜೇಂದ್ರಗಡ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ತಕ್ಷಣವೇ ಡಂಗೂರ ಸಾರಿಸಿ ಆದೇಶವನ್ನು ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಸಂಜೆ ಸಮಯದಲ್ಲಿ ಮೊಬೈಲ್ ಬಳಕೆ, ಟಿವಿ ವೀಕ್ಷಣೆ ಹಾಗೂ ಜೋರಾದ ಸಂಗೀತದಿಂದ ಮಕ್ಕಳ ಓದಿಗೆ ಅಡ್ಡಿಯಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ತಾಲೂಕು ಪಂಚಾಯಿತಿ ಮನವಿ ಮಾಡಿದೆ.
ಈ ಕ್ರಮಕ್ಕೆ ಗ್ರಾಮಸ್ಥರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. “ಇಂದಿನ ಮಕ್ಕಳಿಗೆ ಓದಲು ಸಮಯ ನೀಡುವುದು ಅತ್ಯಂತ ಮುಖ್ಯ. ಸಂಜೆ ವೇಳೆ ಟಿವಿ, ಮೊಬೈಲ್ ಹಾಗೂ ಜೋರಾದ ಸಂಗೀತದಿಂದ ಮಕ್ಕಳ ಗಮನ ಬೇರೆಡೆ ಹರಿಯುತ್ತಿತ್ತು. ಸರ್ಕಾರ ಹಾಗೂ ತಾಲೂಕು ಪಂಚಾಯಿತಿ ತೆಗೆದುಕೊಂಡಿರುವ ಈ ನಿರ್ಧಾರ ಅತ್ಯಂತ ಉತ್ತಮ. ನಾವು ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುತ್ತೇವೆ” ಎಂದು ಗ್ರಾಮಸ್ಥ ಶಿವಾನಂದ ಹೇಳಿದ್ದಾರೆ.
13-04-26 08:19 pm
HK News Staffer
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
13-04-26 09:07 pm
HK News Staffer
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm