ಬ್ರೇಕಿಂಗ್ ನ್ಯೂಸ್
11-02-26 11:02 pm HK News Desk ಕರ್ನಾಟಕ
ತುಮಕೂರು, ಫೆ.12: ಲಕ್ಷಾಂತರ ರೂಪಾಯಿ ಮೌಲ್ಯದ ವಾಹನ, ಇನ್ನಾವುದೇ ವಸ್ತುಗಳನ್ನು ಖರೀದಿಸುವಾಗ ಹತ್ತಾರು ಬಾರಿ ಯೋಚನೆ ಮಾಡ್ತಾರೆ. ಖರೀದಿಸಿದ ವಾಹನ ತೆಗೆದುಕೊಂಡ ಕೆಲವೇ ದಿನಗಳಲ್ಲಿ ಹಾಳಾದರೆ ಅದೆಷ್ಟು ಬೇಜಾರಾಗುತ್ತೆ. 52 ಲಕ್ಷ ರೂಪಾಯಿ ಮೌಲ್ಯದ ‘ಹಿಟಾಚಿ 140’ ಯಂತ್ರವನ್ನು ಖರೀದಿಸಿದ ಐದು ತಿಂಗಳಲ್ಲೇ ಗಂಭೀರ ದೋಷ ಕಾಣಿಸಿಕೊಂಡಿದ್ದು ಇದರಿಂದ ತೀವ್ರ ಚಿಂತೆಗೀಡಾದ ಗ್ರಾಹಕ ಹಿಟಾಚಿಯನ್ನೇ ಶೋರೂಮ್ ಎದುರಿಟ್ಟು ಪ್ರತಿಭಟನೆ ನಡೆಸಿದ್ದಾನೆ.
ಗುಬ್ಬಿ ಮೂಲದ ಗಿರೀಶ್ ಎಂಬವರು ತುಮಕೂರಿನ ಅಂತರಸನಹಳ್ಳಿಯಲ್ಲಿ 7 ಲಕ್ಷ ರೂ. ಡೌನ್ ಪೇಮೆಂಟ್ ಮಾಡಿ 52 ಲಕ್ಷ ಮೌಲ್ಯದ ‘ಹಿಟಾಚಿ 140’ ಯಂತ್ರವನ್ನು ಖರೀದಿಸಿದ್ದರು. ಇದಕ್ಕೆ ಪ್ರತಿ ತಿಂಗಳು 1.15 ಲಕ್ಷ ರೂ. ಇಎಂಐ ಪಾವತಿಸುತ್ತಿದ್ದರು. 7,000 ಗಂಟೆಗಳ ವಾರಂಟಿ ಇರುವುದಾಗಿ ಕಂಪನಿ ತಿಳಿಸಿದ್ದರೂ ಖರೀದಿಸಿದ 480 ಗಂಟೆಗಳ ಬಳಕೆಯಲ್ಲೇ ಯಂತ್ರ ತಾಂತ್ರಿಕ ದೋಷಕ್ಕೀಡಾಗಿ ಸ್ಥಗಿತಗೊಂಡಿದೆ ಎಂದು ಗಿರೀಶ್ ಆರೋಪಿಸಿದ್ದಾರೆ.
ಇದಲ್ಲದೆ, ಯಂತ್ರವು ನಿರೀಕ್ಷೆಗಿಂತ ಹೆಚ್ಚು ಡೀಸೆಲ್ ಖರ್ಚು ಮಾಡುತ್ತಿರುವುದಾಗಿ, ಕಾರ್ಯಕ್ಷಮತೆಯೂ ಕುಸಿದಿರುವುದಾಗಿ ಗಿರೀಶ್ ಹೇಳಿದ್ದಾರೆ. ಕಳೆದ ಎರಡು ತಿಂಗಳಿನಿಂದ ಶೋರೂಂ ಮತ್ತು ಕಂಪನಿಯನ್ನು ಹಲವು ಬಾರಿ ಸಂಪರ್ಕಿಸಿದರೂ ಯಾವುದೇ ಸ್ಪಂದನೆ ಸಿಗಲಿಲ್ಲ ಎಂದು ಗಿರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೋರೂಂ ಸಿಬ್ಬಂದಿಯಿಂದ ಸರಿಯಾದ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಶೋರೂಂ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಶೋರೂಂಗೆ ಬೀಗ ಹಾಕಿದ್ದಾರೆ. ಅಲ್ಲದೆ, ಹಿಟಾಚಿ ಯಂತ್ರವನ್ನೇ ಶೋರೂಂ ಪ್ರವೇಶ ದ್ವಾರಕ್ಕೆ ಅಡ್ಡಲಾಗಿ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರ.
ಮೂರು ದಿನಗಳಿಂದ ಶೋರೂಂ ಎದುರು ಶಾಮಿಯಾನ ಹಾಕಿ ಧರಣಿ ನಡೆಸುತ್ತಿರುವ ಗಿರೀಶ್, “ಯಂತ್ರ ಸರಿಪಡಿಸಬೇಕು, ಇಲ್ಲವೇ ನನ್ನ ಹಣ ವಾಪಸ್ ಕೊಡಬೇಕು. ಸಾಲ ಮಾಡಿ ಯಂತ್ರ ಖರೀದಿಸಿದ್ದೇನೆ. ಕಂಪನಿ ಹೇಳುವುದೊಂದು, ಮಾಡುವುದೊಂದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
A customer in Tumakuru staged a protest after a ₹52 lakh Hitachi 140 machine developed major technical issues within five months of purchase. Alleging poor response from the company despite warranty coverage, the buyer locked the showroom and parked the faulty machine at its entrance, demanding repair or refund.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm