ಬ್ರೇಕಿಂಗ್ ನ್ಯೂಸ್
11-02-26 11:02 pm HK News Desk ಕರ್ನಾಟಕ
ತುಮಕೂರು, ಫೆ.12: ಲಕ್ಷಾಂತರ ರೂಪಾಯಿ ಮೌಲ್ಯದ ವಾಹನ, ಇನ್ನಾವುದೇ ವಸ್ತುಗಳನ್ನು ಖರೀದಿಸುವಾಗ ಹತ್ತಾರು ಬಾರಿ ಯೋಚನೆ ಮಾಡ್ತಾರೆ. ಖರೀದಿಸಿದ ವಾಹನ ತೆಗೆದುಕೊಂಡ ಕೆಲವೇ ದಿನಗಳಲ್ಲಿ ಹಾಳಾದರೆ ಅದೆಷ್ಟು ಬೇಜಾರಾಗುತ್ತೆ. 52 ಲಕ್ಷ ರೂಪಾಯಿ ಮೌಲ್ಯದ ‘ಹಿಟಾಚಿ 140’ ಯಂತ್ರವನ್ನು ಖರೀದಿಸಿದ ಐದು ತಿಂಗಳಲ್ಲೇ ಗಂಭೀರ ದೋಷ ಕಾಣಿಸಿಕೊಂಡಿದ್ದು ಇದರಿಂದ ತೀವ್ರ ಚಿಂತೆಗೀಡಾದ ಗ್ರಾಹಕ ಹಿಟಾಚಿಯನ್ನೇ ಶೋರೂಮ್ ಎದುರಿಟ್ಟು ಪ್ರತಿಭಟನೆ ನಡೆಸಿದ್ದಾನೆ.
ಗುಬ್ಬಿ ಮೂಲದ ಗಿರೀಶ್ ಎಂಬವರು ತುಮಕೂರಿನ ಅಂತರಸನಹಳ್ಳಿಯಲ್ಲಿ 7 ಲಕ್ಷ ರೂ. ಡೌನ್ ಪೇಮೆಂಟ್ ಮಾಡಿ 52 ಲಕ್ಷ ಮೌಲ್ಯದ ‘ಹಿಟಾಚಿ 140’ ಯಂತ್ರವನ್ನು ಖರೀದಿಸಿದ್ದರು. ಇದಕ್ಕೆ ಪ್ರತಿ ತಿಂಗಳು 1.15 ಲಕ್ಷ ರೂ. ಇಎಂಐ ಪಾವತಿಸುತ್ತಿದ್ದರು. 7,000 ಗಂಟೆಗಳ ವಾರಂಟಿ ಇರುವುದಾಗಿ ಕಂಪನಿ ತಿಳಿಸಿದ್ದರೂ ಖರೀದಿಸಿದ 480 ಗಂಟೆಗಳ ಬಳಕೆಯಲ್ಲೇ ಯಂತ್ರ ತಾಂತ್ರಿಕ ದೋಷಕ್ಕೀಡಾಗಿ ಸ್ಥಗಿತಗೊಂಡಿದೆ ಎಂದು ಗಿರೀಶ್ ಆರೋಪಿಸಿದ್ದಾರೆ.
ಇದಲ್ಲದೆ, ಯಂತ್ರವು ನಿರೀಕ್ಷೆಗಿಂತ ಹೆಚ್ಚು ಡೀಸೆಲ್ ಖರ್ಚು ಮಾಡುತ್ತಿರುವುದಾಗಿ, ಕಾರ್ಯಕ್ಷಮತೆಯೂ ಕುಸಿದಿರುವುದಾಗಿ ಗಿರೀಶ್ ಹೇಳಿದ್ದಾರೆ. ಕಳೆದ ಎರಡು ತಿಂಗಳಿನಿಂದ ಶೋರೂಂ ಮತ್ತು ಕಂಪನಿಯನ್ನು ಹಲವು ಬಾರಿ ಸಂಪರ್ಕಿಸಿದರೂ ಯಾವುದೇ ಸ್ಪಂದನೆ ಸಿಗಲಿಲ್ಲ ಎಂದು ಗಿರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೋರೂಂ ಸಿಬ್ಬಂದಿಯಿಂದ ಸರಿಯಾದ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಶೋರೂಂ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಶೋರೂಂಗೆ ಬೀಗ ಹಾಕಿದ್ದಾರೆ. ಅಲ್ಲದೆ, ಹಿಟಾಚಿ ಯಂತ್ರವನ್ನೇ ಶೋರೂಂ ಪ್ರವೇಶ ದ್ವಾರಕ್ಕೆ ಅಡ್ಡಲಾಗಿ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರ.
ಮೂರು ದಿನಗಳಿಂದ ಶೋರೂಂ ಎದುರು ಶಾಮಿಯಾನ ಹಾಕಿ ಧರಣಿ ನಡೆಸುತ್ತಿರುವ ಗಿರೀಶ್, “ಯಂತ್ರ ಸರಿಪಡಿಸಬೇಕು, ಇಲ್ಲವೇ ನನ್ನ ಹಣ ವಾಪಸ್ ಕೊಡಬೇಕು. ಸಾಲ ಮಾಡಿ ಯಂತ್ರ ಖರೀದಿಸಿದ್ದೇನೆ. ಕಂಪನಿ ಹೇಳುವುದೊಂದು, ಮಾಡುವುದೊಂದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
A customer in Tumakuru staged a protest after a ₹52 lakh Hitachi 140 machine developed major technical issues within five months of purchase. Alleging poor response from the company despite warranty coverage, the buyer locked the showroom and parked the faulty machine at its entrance, demanding repair or refund.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm