ಬ್ರೇಕಿಂಗ್ ನ್ಯೂಸ್
13-02-26 10:41 am HK News Desk ಕರ್ನಾಟಕ
ಬೆಂಗಳೂರು, ಫೆ 12: ಬೆಳ್ಳಂ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯಾವರ ಬಳಿ ಘಟನೆ ನಡೆದಿದೆ. ಕಾರು, ಕ್ಯಾಂಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ನಲ್ಲಿದ್ದ ಬರ್ತಿದ್ದ ಸವಾರ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಹಾಗೂ ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 7 ಮಂದಿಯ ಜೀವ ಹೋಗಿದೆ. ಸ್ಥಳಕ್ಕೆ ಸೂಲಿಬೆಲೆ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಶವಗಳನ್ನ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
7 ಮಂದಿ ಪಾಲಿಗೆ ಯಮನಾದ ಕ್ಯಾಂಟರ್:
ಮೊದಲಿಗೆ ಕ್ಯಾಂಟರ್ ಬೈಕ್ಗೆ ಡಿಕ್ಕಿ ಹೊಡೆದಿದೆ ನಂತರ ಕ್ಯಾಂಟರ್ನ ಚಾರ್ಸಿ ಕಟ್ ಆಗಿದೆ. ಬಳಿಕ ಕ್ಯಾಂಟರ್ ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಹಿನ್ನಲೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರೆಲ್ಲಾ ಕೊತ್ತನೂರು ಮೂಲದವರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಕೋಲಾರದಿಂದ ದೇವನಹಳ್ಳಿಗೆ ಪ್ರಯಾಣ ಬೆಳೆಸುತ್ತಿದ್ರು. ಪ್ರಾಥಮಿಕ ತನಿಖೆಯ ಪ್ರಕಾರ, ಎಕ್ಸ್ಯುವಿ 700 ಕಾರಿನಲ್ಲಿ ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳು ಜಾಲಿ ರೈಡ್ಗೆ ಬಂದಿದ್ದರು ಎನ್ನಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಎಕ್ಸ್ಯುವಿ 700 ಕಾರಿನಲ್ಲಿ ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳು ಜಾಲಿ ರೈಡ್ಗೆ ಬಂದಿದ್ದರು. ನೂತನ ಹೆದ್ದಾರಿಯಲ್ಲಿ ಅತಿವೇಗವಾಗಿ ಕಾರು ಚಲಾಯಿಸುತ್ತಿದ್ದಾಗ ಮೊದಲು ಗಗನ್ ಎಂಬವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ ಚಾಲಕ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದಿದ್ದಾನೆ.
ಸ್ಥಳಕ್ಕೆ ಭೇಟಿ ನೀಡಿದ ಐಜಿ ಲಾಭೂ ರಾಮ್ ಅವರು ಅಪಘಾತ ಸಂಬಂಧ ಮಾಹಿತಿ ನೀಡಿದ್ದಾರೆ. ಇಂದು ಬೆಳಗಿನ ಜಾವ ಅಪಘಾತ ನಡೆದಿದೆ. ಮೊದಲು ಟ್ಯಾಕ್ಸಿ ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಆಗ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದಾನೆ. ಈಗಾಗಲೇ ಮೂರು ಜನರ ಮಾಹಿತಿ ಕಲೆ ಹಾಕಿದ್ದೇವೆ. ಉಳಿದವರ ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ತನಿಖೆ ಮುಂದುವರಿದಿದೆ ಎಂದಿದ್ದಾರೆ.
ಹೊಸಕೋಟೆ ತಾಲ್ಲೂಕಿನ ಎಂ.ಸತ್ಯಾವರ ಬಳಿ ನಡೆದಿದ್ದ ಅಪಘಾತದಲ್ಲಿ ಮೃತ ಬೈಕ್ ಸವಾರ ದೇವನಹಳ್ಳಿ ಮೂಲದ ಗಗನ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಆರು ಜನರ ಪೈಕಿ ಪೊಲೀಸರು ಇಬ್ಬರ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಅಶ್ವಿನ್, ಕರಣ್ ಆಲಿ ಕಾರಿನಲ್ಲಿದ್ದ ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಉಳಿದ ಮೃತರ ಮಾಹಿತಿಯನ್ನ ಪೊಲೀಸರು ಕಲೆ ಹಾಕುತ್ತಿದ್ದಾರೆ.
ಸ್ಥಳಕ್ಕೆ ಭೇಟಿ ಸೋಕೋ ಟೀಮ್ ಭೇಟಿ ನೀಡಿದ್ದು, ಘಟನೆಯ ಕುರಿತು ಎಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಮಾಹಿತಿ ಕಲೆ ಹಾಕುತ್ತಿದೆ.
ಇದೇ ವೇಳೆ, ಹೆದ್ದಾರಿಯ ವಿನ್ಯಾಸ ಮತ್ತು ನಿರ್ಮಾಣದ ಕುರಿತು ಸ್ಥಳೀಯರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಾಧುಪ್ಪನಹಳ್ಳಿಯಿಂದ ಕಮಳಿಪುರ ಬ್ರಿಡ್ಜ್ ವರೆಗಿನ ರಸ್ತೆ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದೆ ಎಂದು ಆರೋಪಿಸಲಾಗಿದೆ. ಸರ್ವೀಸ್ ರಸ್ತೆಗಳು ಕನಿಷ್ಠ 18 ಅಡಿ ಅಗಲ ಇರಬೇಕಾದರೆ, ಇಲ್ಲಿ ಮೂರೂವರೆ ಅಥವಾ ಎರಡೂವರೆ ಅಡಿ ಮಾತ್ರ ಇರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. 2010ರಲ್ಲಿ ರೈತರು ಜಮೀನು ಬಿಟ್ಟುಕೊಟ್ಟಿದ್ದರೂ ಸಮರ್ಪಕ ಪರಿಹಾರ ಸಿಕ್ಕಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ.
ಆದಾಗ್ಯೂ, ಪೊಲೀಸ್ ಮೂಲಗಳ ಪ್ರಕಾರ ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಈ ಭೀಕರ ಸರಣಿ ಅಪಘಾತದ ಪ್ರಮುಖ ಕಾರಣವಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm