ಬ್ರೇಕಿಂಗ್ ನ್ಯೂಸ್
13-02-26 10:41 am HK News Desk ಕರ್ನಾಟಕ
ಬೆಂಗಳೂರು, ಫೆ 12: ಬೆಳ್ಳಂ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯಾವರ ಬಳಿ ಘಟನೆ ನಡೆದಿದೆ. ಕಾರು, ಕ್ಯಾಂಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ನಲ್ಲಿದ್ದ ಬರ್ತಿದ್ದ ಸವಾರ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಹಾಗೂ ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 7 ಮಂದಿಯ ಜೀವ ಹೋಗಿದೆ. ಸ್ಥಳಕ್ಕೆ ಸೂಲಿಬೆಲೆ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಶವಗಳನ್ನ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
7 ಮಂದಿ ಪಾಲಿಗೆ ಯಮನಾದ ಕ್ಯಾಂಟರ್:
ಮೊದಲಿಗೆ ಕ್ಯಾಂಟರ್ ಬೈಕ್ಗೆ ಡಿಕ್ಕಿ ಹೊಡೆದಿದೆ ನಂತರ ಕ್ಯಾಂಟರ್ನ ಚಾರ್ಸಿ ಕಟ್ ಆಗಿದೆ. ಬಳಿಕ ಕ್ಯಾಂಟರ್ ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಹಿನ್ನಲೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರೆಲ್ಲಾ ಕೊತ್ತನೂರು ಮೂಲದವರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಕೋಲಾರದಿಂದ ದೇವನಹಳ್ಳಿಗೆ ಪ್ರಯಾಣ ಬೆಳೆಸುತ್ತಿದ್ರು. ಪ್ರಾಥಮಿಕ ತನಿಖೆಯ ಪ್ರಕಾರ, ಎಕ್ಸ್ಯುವಿ 700 ಕಾರಿನಲ್ಲಿ ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳು ಜಾಲಿ ರೈಡ್ಗೆ ಬಂದಿದ್ದರು ಎನ್ನಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಎಕ್ಸ್ಯುವಿ 700 ಕಾರಿನಲ್ಲಿ ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳು ಜಾಲಿ ರೈಡ್ಗೆ ಬಂದಿದ್ದರು. ನೂತನ ಹೆದ್ದಾರಿಯಲ್ಲಿ ಅತಿವೇಗವಾಗಿ ಕಾರು ಚಲಾಯಿಸುತ್ತಿದ್ದಾಗ ಮೊದಲು ಗಗನ್ ಎಂಬವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ ಚಾಲಕ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದಿದ್ದಾನೆ.
ಸ್ಥಳಕ್ಕೆ ಭೇಟಿ ನೀಡಿದ ಐಜಿ ಲಾಭೂ ರಾಮ್ ಅವರು ಅಪಘಾತ ಸಂಬಂಧ ಮಾಹಿತಿ ನೀಡಿದ್ದಾರೆ. ಇಂದು ಬೆಳಗಿನ ಜಾವ ಅಪಘಾತ ನಡೆದಿದೆ. ಮೊದಲು ಟ್ಯಾಕ್ಸಿ ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಆಗ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದಾನೆ. ಈಗಾಗಲೇ ಮೂರು ಜನರ ಮಾಹಿತಿ ಕಲೆ ಹಾಕಿದ್ದೇವೆ. ಉಳಿದವರ ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ತನಿಖೆ ಮುಂದುವರಿದಿದೆ ಎಂದಿದ್ದಾರೆ.
ಹೊಸಕೋಟೆ ತಾಲ್ಲೂಕಿನ ಎಂ.ಸತ್ಯಾವರ ಬಳಿ ನಡೆದಿದ್ದ ಅಪಘಾತದಲ್ಲಿ ಮೃತ ಬೈಕ್ ಸವಾರ ದೇವನಹಳ್ಳಿ ಮೂಲದ ಗಗನ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಆರು ಜನರ ಪೈಕಿ ಪೊಲೀಸರು ಇಬ್ಬರ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಅಶ್ವಿನ್, ಕರಣ್ ಆಲಿ ಕಾರಿನಲ್ಲಿದ್ದ ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಉಳಿದ ಮೃತರ ಮಾಹಿತಿಯನ್ನ ಪೊಲೀಸರು ಕಲೆ ಹಾಕುತ್ತಿದ್ದಾರೆ.
ಸ್ಥಳಕ್ಕೆ ಭೇಟಿ ಸೋಕೋ ಟೀಮ್ ಭೇಟಿ ನೀಡಿದ್ದು, ಘಟನೆಯ ಕುರಿತು ಎಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಮಾಹಿತಿ ಕಲೆ ಹಾಕುತ್ತಿದೆ.
ಇದೇ ವೇಳೆ, ಹೆದ್ದಾರಿಯ ವಿನ್ಯಾಸ ಮತ್ತು ನಿರ್ಮಾಣದ ಕುರಿತು ಸ್ಥಳೀಯರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಾಧುಪ್ಪನಹಳ್ಳಿಯಿಂದ ಕಮಳಿಪುರ ಬ್ರಿಡ್ಜ್ ವರೆಗಿನ ರಸ್ತೆ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದೆ ಎಂದು ಆರೋಪಿಸಲಾಗಿದೆ. ಸರ್ವೀಸ್ ರಸ್ತೆಗಳು ಕನಿಷ್ಠ 18 ಅಡಿ ಅಗಲ ಇರಬೇಕಾದರೆ, ಇಲ್ಲಿ ಮೂರೂವರೆ ಅಥವಾ ಎರಡೂವರೆ ಅಡಿ ಮಾತ್ರ ಇರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. 2010ರಲ್ಲಿ ರೈತರು ಜಮೀನು ಬಿಟ್ಟುಕೊಟ್ಟಿದ್ದರೂ ಸಮರ್ಪಕ ಪರಿಹಾರ ಸಿಕ್ಕಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ.
ಆದಾಗ್ಯೂ, ಪೊಲೀಸ್ ಮೂಲಗಳ ಪ್ರಕಾರ ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಈ ಭೀಕರ ಸರಣಿ ಅಪಘಾತದ ಪ್ರಮುಖ ಕಾರಣವಾಗಿದೆ.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 09:07 pm
HK News Staffer
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm