ಬ್ರೇಕಿಂಗ್ ನ್ಯೂಸ್
15-02-26 10:22 am HK News Staffer ಕರ್ನಾಟಕ
ಬೆಂಗಳೂರು, ಫೆ 15: ಹೊಸಕೋಟೆ ಬಳಿ ನಡೆದ ಡೆಡ್ಲಿ ಆಕ್ಸಿಡೆಂಟ್ ನಲ್ಲಿ ಏಳು ಮಂದಿ ದಾರುಣ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ನೆಲಮಂಗಲದ ಜಿಂದಾಲ್ ಫ್ಲೈ ಓವರ್ ಬಳಿ ಭೀಕರ ಕಾರು ಅಪಘಾತ ಸಂಭವಿದ್ದು, ಐವರು ಯುವಕರು ಸಾವನ್ನಪ್ಪಿದ್ದಾರೆ. ಸಿನಿಮೀಯ ಸ್ಟೈನಲ್ಲಿ ಕಾರು ಪಲ್ಟಿಯಾಗಿ 45 ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ
ತುಮಕೂರಿನಿಂದ ಬೆಂಗಳೂರಿನತ್ತ ಪ್ರಯಾಣ ಮಾಡ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಜಿಂದಾಲ್ ಬಳಿಯ ಫ್ಲೈ ಓವರ್ ಮೇಲೆ ರಾತ್ರಿ 11.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.ಈ ವೇಳೆ ಜಿಂದಾಲ್ ಬಳಿಯ ಪ್ಲೈ ಓವರ್ ಮೇಲೆ ಬರ್ತಿದ್ದಂತೆ ಕಾರು ನಿಯಂತ್ರಣ ಕಳೆದುಕೊಂಡು ಮೊದಲು ಬಲಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ಸಿನಿಮೀಯ ಸ್ಟೈಲ್ನಲ್ಲಿ ಎರಡು ಪಲ್ಟಿ ಹೊಡೆದು KSRTC ಬಸ್ಗೂ ಡಿಕ್ಕಿ ಹೊಡೆದಿದೆ.


ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂಗೊಂಡಿದ್ದು, ಬಸ್ ಮುಂಭಾಗ ಡ್ಯಾಮೇಜ್ ಆಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 42 ಮಂದಿ ಪ್ರಯಾಣಿಕರಿಗೆ, ಯಾವುದೇ ಅಪಾಯವಾಗಿಲ್ಲ. ಆದ್ರೆ ಕಾರಿನಲ್ಲಿದ್ದ ಐದು ಮಂದಿಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರ ಪೈಕಿ ಇಬ್ಬರನ್ನು ದೊಡ್ಡಬಳ್ಳಾಪುರದ ಹರ್ಷಿತ್ ಮತ್ತು ಲಿಖಿತ್ ಎಂದು ಗುರುತಿಸಲಾಗಿದ್ದು, ಇನ್ನುಳಿದ ಮೂವರ ಗುರುತು ಪತ್ತೆಯಾಗಿಲ್ಲ ಎಂದ ಪೊಲೀಸರು ತಿಳಿಸಿದ್ದಾರೆ. ಮೃತ ಹರ್ಷಿತ್ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿದ್ದ ಓದುತ್ತಿದ್ದ ಎಂಬುದು ತಿಳಿದುಬಂದಿದೆ.
ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಮುಂಭಾಗ ಮೃತ ಹರ್ಷಿತ್ನ ತಾಯಿ ಆಕ್ರಂದನ ಮುಗಿಲು ಮುಟ್ಟಿದ್ದು, ಹೆತ್ತ ಮಗನನ್ನು ಕಳೆದುಕೊಂಡ ತಾಯಿಯ ದು:ಖ ನೆರೆದವರ ಕಣ್ಣುಗಳನ್ನೂ ಒದ್ದೆ ಮಾಡಿದೆ. ಹರ್ಷಿತ್ ನಿನ್ನೆ (ಫೆ.14-ಶನಿವಾರ) ರಾತ್ರಿ 8-30ಗೆ ಗೆಳೆಯರನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಬಂದಿದ್ದ. ಆದರೆ ವಿಧಿಯ ಆಟಕ್ಕೆ ಬಲಿಯಾಗಿರುವುದು ನಿಜಕ್ಕೂ ದುರಂತವೇ ಸರಿ.
ಎಲ್ಲಾ ಐವರೂ ಯುವಕರು ಸ್ನೇಹಿತರು ಎನ್ನಲಾಗಿದ್ದು, ರಾತ್ರಿ ಲಾಂಗ್ ಡ್ರೈವ್ಗಾಗಿ ಇಂಡಿಕಾ ಕಾರು ಏರಿದ್ದರು. ಇದರಲ್ಲಿ ಬಹುತೇಕರು ತಮ್ಮ ಮನೆಯಲ್ಲಿ ತಿಳಿಸದೆಯೇ ಜಾಲಿ ರೈಡ್ಗೆ ಬಂದಿದ್ದು, ದಾರುಣವಾಗಿ ಅಂತ್ಯಗೊಂಡಿದ್ದಾರೆ. ಅಪಘಾತದ ಬಳಿಕವೂ ಚಾಲಕ ಲಿಖಿತ್ ಜೀವಂತವಾಗಿದ್ದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾನೆ.
Even before the shock of the recent Hoskote tragedy could fade, another deadly road accident has claimed five young lives on the outskirts of Bengaluru. The accident occurred around midnight near the Navayuga Toll close to the Jindal Hospital flyover in Nelamangala. A Tata Indica car reportedly jumped the road divider and rammed head-on into a Karnataka State Road Transport Corporation
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm