ಬ್ರೇಕಿಂಗ್ ನ್ಯೂಸ್
17-02-26 02:53 pm HK News Desk ಕರ್ನಾಟಕ
ಬೆಂಗಳೂರು, ಫೆ.17: ದೇಶದ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಪ್ರಭಾವ ಬೀರಬಲ್ಲ ಮಹತ್ವದ ಆದೇಶವೊಂದನ್ನು ದೆಹಲಿ ಹೈಕೋರ್ಟ್ ಹೊರಡಿಸಿದೆ. ಪ್ರಸಿದ್ಧ ಸಂಗೀತ ನಿರ್ದೇಶಕ ಇಳಯರಾಜಾ ಅವರಿಗೆ ಸಂಬಂಧಿಸಿದ 134 ಚಲನಚಿತ್ರ ಹಾಡುಗಳ ಹಕ್ಕು ವಿಚಾರದಲ್ಲಿ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
1976–2001ರ ಅವಧಿಯಲ್ಲಿ ರಚಿಸಲಾದ 134 ಚಿತ್ರಗಳ ಹಾಡುಗಳ ಹಕ್ಕು ತಮ್ಮದೇ ಎಂದು ಸರಿಗಮ ಕಂಪನಿ ಹೇಳಿಕೊಂಡಿತ್ತು. ಇಳಯರಾಜಾ ಸಂಗೀತ ಸಂಯೋಜಿಸಿದ 134 ಚಲನಚಿತ್ರಗಳ ಸಂಗೀತ ಹಾಗೂ ಧ್ವನಿಮುದ್ರಣ ಹಕ್ಕುಗಳನ್ನು ನಿರ್ಮಾಪಕರೊಂದಿಗೆ ಮಾಡಿದ ಔಪಚಾರಿಕ ಒಪ್ಪಂದಗಳ ಮೂಲಕ ವಿಶ್ವವ್ಯಾಪಿ ಮತ್ತು ಶಾಶ್ವತವಾಗಿ ಪಡೆದಿದ್ದೇವೆ ಎಂದು ಸರಿಗಮ ನ್ಯಾಯಾಲಯಕ್ಕೆ ತಿಳಿಸಿತ್ತು.
ಆದರೆ ಇಳಯರಾಜಾ ಈ ಹಾಡುಗಳನ್ನು ಅಮೆಜಾನ್ ಮ್ಯೂಸಿಕ್, ಐಟ್ಯೂನ್ಸ್ ಮತ್ತು ಜಿಯೋಸಾವನ್ ಸೇರಿದಂತೆ ಡಿಜಿಟಲ್ ವೇದಿಕೆಗಳಲ್ಲಿ ಅಪ್ಲೋಡ್ ಮಾಡಿ ತಮ್ಮದೇ ಹಕ್ಕು ಎಂದು ಹೇಳಿಕೊಳ್ಳುತ್ತಿರುವುದು ಕಾನೂನುಬಾಹಿರ ಎಂದು ಸಂಸ್ಥೆ ವಾದಿಸಿತ್ತು.
ಸರಿಗಮ ಪರ ವಕೀಲರು 1957ರ ಹಕ್ಕುಸ್ವಾಮ್ಯ ಕಾಯಿದೆಯ ಪ್ರಕಾರ ಚಲನಚಿತ್ರಕ್ಕಾಗಿ ರಚಿಸಲಾದ ಸಂಗೀತದ ಮೊದಲ ಮಾಲೀಕರು ನಿರ್ಮಾಪಕರೇ ಆಗುತ್ತಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ತುಷಾರ್ ರಾವ್ ಕೆಟೇಲಾ ಸರಿಗಮದ ವಾದ ಒಪ್ಪಿಕೊಂಡು, ತಡೆಯಾಜ್ಞೆ ನೀಡದಿದ್ದರೆ ಕಂಪನಿಗೆ ತುಂಬಲಾಗದ ನಷ್ಟವಾಗುತ್ತದೆ ಎಂದು ಹೇಳಿದ್ದಾರೆ. ಜೊತೆಗೆ ಇಳಯರಾಜಾ ಹಾಗೂ ಅವರ ಪ್ರತಿನಿಧಿಗಳು ಸಂಬಂಧಿತ ಹಾಡುಗಳನ್ನು ಬಳಸಬಾರದು ಅಥವಾ ಪರವಾನಗಿ ನೀಡಬಾರದು ಎಂದು ಆದೇಶಿಸಿದ್ದಾರೆ.
ಈಗಾಗಲೇ ಜನಪ್ರಿಯ ತಮಿಳು ಹಾಡು “ಎನ್ ಇನಿಯಾ ಪೊನ್ ನಿಲವೇ” ಬಳಕೆ ಕುರಿತಾಗಿ ಇಳಯರಾಜಾ ಮತ್ತು ಸರಿಗಮಾ ನಡುವೆ ವಿವಾದ ನಡೆದಿತ್ತು. ಅಘಾಥಿಯಾ ಚಿತ್ರದ ಬಳಕೆಗೆ ಸಂಬಂಧಿಸಿ ನ್ಯಾಯಾಲಯ ಮೊದಲು ನಿರ್ಮಾಪಕರು ಸರಿಗಮಾದಿಂದ ಪರವಾನಗಿ ಪಡೆಯದೆ ಹಾಡನ್ನು ಬಳಸಬಾರದು ಎಂದು ಹೇಳಿತ್ತು. ನಂತರ ನಿರ್ಮಾಪಕರ ಹೂಡಿಕೆ ಪರಿಗಣಿಸಿ, ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಬಳಿ 30 ಲಕ್ಷ ರೂ. ಠೇವಣಿ ಇಡುವ ಷರತ್ತಿನೊಂದಿಗೆ ಬಳಕೆ ಮಾಡಲು ಅವಕಾಶ ನೀಡಲಾಗಿತ್ತು.
ನ್ಯಾಯಾಲಯದ ಆದೇಶ ಪ್ರಕಾರ, ಇಳಯರಾಜಾ ಅಥವಾ ಅವರ ಪರವಾಗಿ ಕಾರ್ಯ ನಿರ್ವಹಿಸುವ ಸಹಭಾಗಿಗಳು, ಪ್ರತಿನಿಧಿಗಳು ಅಥವಾ ಲೈಸೆನ್ಸಿಗಳು ಸರಿಗಮ ವಶದಲ್ಲಿರುವ 134 ಚಿತ್ರಗಳ ಧ್ವನಿಮುದ್ರಣ ಹಾಗೂ ಸಾಹಿತ್ಯ-ಸಂಗೀತ ಕೃತಿಗಳ ಮೇಲೆ ಯಾವುದೇ ಮಾಲೀಕತ್ವದ ಹಕ್ಕು ಹೊಂದಿದ್ದೇವೆ ಎಂದು ಹೇಳಿಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಈ ಪ್ರಕರಣ ಸಂಗೀತ ಕಾಪಿರೈಟ್ ಹಕ್ಕುಗಳ ಕುರಿತು ಚಿತ್ರೋದ್ಯಮ ಮತ್ತು ಡಿಜಿಟಲ್ ಸ್ಟ್ರೀಮಿಂಗ್ ವಲಯದಲ್ಲಿ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm