ಬ್ರೇಕಿಂಗ್ ನ್ಯೂಸ್
18-02-26 09:02 pm HK Desk ಕರ್ನಾಟಕ
ಬೆಂಗಳೂರು, ಫೆ.18: ವಿಧಾನಸಭೆ ಅಧಿವೇಶನದ ಬೆನ್ನಲ್ಲೇ ಮತ್ತೆ ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ. ಭದ್ರತೆಯ ನೆಪವೊಡ್ಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಾಧ್ಯಮಗಳ ಚಲನವಲನಕ್ಕೆ ನಿಯಂತ್ರಣ ಹಾಕಲು ಸೂಚನೆ ನೀಡಿದೆ. ಇನ್ನು ಮುಂದೆ ನಿಗದಿತ ಸ್ಥಳದಲ್ಲೇ ಜನಪ್ರತಿನಿಧಿಗಳ ಪ್ರತಿಕ್ರಿಯೆ ಪಡೆಯಬೇಕು ಎಂಬ ನಿಯಮ ಜಾರಿಗೆ ತರಲು ಮುಂದಾಗಿದೆ.
ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಇದಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಧಾನಸೌಧದ ಕಾರಿಡಾರ್ಗಳು, ಸಚಿವರ ಕೊಠಡಿಗಳ ಬಳಿ ಅಥವಾ ಮುಖ್ಯಮಂತ್ರಿಗಳ ಕಚೇರಿಯ ಹೊರಗೆ ತಕ್ಷಣದ ಪ್ರತಿಕ್ರಿಯೆ ಪಡೆಯುವ ಅವಕಾಶ ಇನ್ನು ಸಿಗುವುದಿಲ್ಲ. ಸರ್ಕಾರ ಒಂದು ಅಥವಾ ಎರಡು ಸ್ಥಳಗಳನ್ನು ಮಾತ್ರ ‘ಮೀಡಿಯಾ ಪಾಯಿಂಟ್’ ಎಂದು ಗುರುತಿಸಲಿದೆ.
ಇತ್ತೀಚೆಗೆ ವಿಧಾನಸೌಧದ ಹೈ-ಸೆಕ್ಯೂರಿಟಿ ವಲಯದಲ್ಲೇ 300 ಗ್ರಾಂ ಚಿನ್ನ ಕಳ್ಳತನವಾದ ಘಟನೆ ಭದ್ರತಾ ವೈಫಲ್ಯವನ್ನು ಬಹಿರಂಗಪಡಿಸಿತ್ತು. ಇದನ್ನ ಮರೆಮಾಚಲು ಈ ಕ್ರಮವೇ ಎಂಬ ಪ್ರಶ್ನೆ ಎದುರಾಗಿದೆ.
ವಿರೋಧ ಪಕ್ಷಗಳ ಕಿಡಿ;
ಕಾಂಗ್ರೆಸ್ ಪಕ್ಷದ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪತ್ರಕರ್ತರನ್ನು ಕಂಡರೆ ಕಾಂಗ್ರೆಸ್ ಸರ್ಕಾರಕ್ಕೆ ನಡುಕವೇ ಎಂಬ ಪ್ರಶ್ನೆಯನ್ನು ಜೆಡಿಎಸ್ ಮಾಡಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಕರ್ನಾಟಕದತ್ತ ಗಮನ ಹರಿಸಲಿ ಎಂದು ಟೀಕಿಸಿದ್ದಾರೆ.
ಇತ್ತ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ಸರ್ಕಾರದ ಕ್ರಮವನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಕಿಡಿಕಾರಿದ್ದಾರೆ. ಸಚಿವರ ಕಚೇರಿಯಲ್ಲಿ ನಡೆದ ಕಳ್ಳತನದ ಬಳಿಕ ಮಾಧ್ಯಮಗಳ ಮೇಲೆ ನಿರ್ಬಂಧ ತರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಈ ನಡುವೆ ಸಚಿವ ಚಲುವರಾಯ ಸ್ವಾಮಿ ಪ್ರತಿಕ್ರಿಯೆ ನೀಡಿ, ಈ ವಿಚಾರವನ್ನು ಸಿಎಂ ಗಮನಕ್ಕೆ ತಂದು ಮಾಧ್ಯಮಗಳಿಗೆ ಮುಕ್ತ ಅವಕಾಶ ಕಲ್ಪಿಸುವ ಬಗ್ಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಒಟ್ನಲ್ಲಿ ವಿಧಾನಸೌಧದೊಳಗಿನ ಈ ಹೊಸ ನಿಯಮ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
The Karnataka government has moved to impose fresh restrictions on media movement inside Vidhana Soudha following the ongoing Assembly session, citing security concerns.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 10:46 pm
Mangaluru Staffer
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm