ಬ್ರೇಕಿಂಗ್ ನ್ಯೂಸ್
18-02-26 09:02 pm HK Desk ಕರ್ನಾಟಕ
ಬೆಂಗಳೂರು, ಫೆ.18: ವಿಧಾನಸಭೆ ಅಧಿವೇಶನದ ಬೆನ್ನಲ್ಲೇ ಮತ್ತೆ ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ. ಭದ್ರತೆಯ ನೆಪವೊಡ್ಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಾಧ್ಯಮಗಳ ಚಲನವಲನಕ್ಕೆ ನಿಯಂತ್ರಣ ಹಾಕಲು ಸೂಚನೆ ನೀಡಿದೆ. ಇನ್ನು ಮುಂದೆ ನಿಗದಿತ ಸ್ಥಳದಲ್ಲೇ ಜನಪ್ರತಿನಿಧಿಗಳ ಪ್ರತಿಕ್ರಿಯೆ ಪಡೆಯಬೇಕು ಎಂಬ ನಿಯಮ ಜಾರಿಗೆ ತರಲು ಮುಂದಾಗಿದೆ.
ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಇದಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಧಾನಸೌಧದ ಕಾರಿಡಾರ್ಗಳು, ಸಚಿವರ ಕೊಠಡಿಗಳ ಬಳಿ ಅಥವಾ ಮುಖ್ಯಮಂತ್ರಿಗಳ ಕಚೇರಿಯ ಹೊರಗೆ ತಕ್ಷಣದ ಪ್ರತಿಕ್ರಿಯೆ ಪಡೆಯುವ ಅವಕಾಶ ಇನ್ನು ಸಿಗುವುದಿಲ್ಲ. ಸರ್ಕಾರ ಒಂದು ಅಥವಾ ಎರಡು ಸ್ಥಳಗಳನ್ನು ಮಾತ್ರ ‘ಮೀಡಿಯಾ ಪಾಯಿಂಟ್’ ಎಂದು ಗುರುತಿಸಲಿದೆ.
ಇತ್ತೀಚೆಗೆ ವಿಧಾನಸೌಧದ ಹೈ-ಸೆಕ್ಯೂರಿಟಿ ವಲಯದಲ್ಲೇ 300 ಗ್ರಾಂ ಚಿನ್ನ ಕಳ್ಳತನವಾದ ಘಟನೆ ಭದ್ರತಾ ವೈಫಲ್ಯವನ್ನು ಬಹಿರಂಗಪಡಿಸಿತ್ತು. ಇದನ್ನ ಮರೆಮಾಚಲು ಈ ಕ್ರಮವೇ ಎಂಬ ಪ್ರಶ್ನೆ ಎದುರಾಗಿದೆ.
ವಿರೋಧ ಪಕ್ಷಗಳ ಕಿಡಿ;
ಕಾಂಗ್ರೆಸ್ ಪಕ್ಷದ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪತ್ರಕರ್ತರನ್ನು ಕಂಡರೆ ಕಾಂಗ್ರೆಸ್ ಸರ್ಕಾರಕ್ಕೆ ನಡುಕವೇ ಎಂಬ ಪ್ರಶ್ನೆಯನ್ನು ಜೆಡಿಎಸ್ ಮಾಡಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಕರ್ನಾಟಕದತ್ತ ಗಮನ ಹರಿಸಲಿ ಎಂದು ಟೀಕಿಸಿದ್ದಾರೆ.
ಇತ್ತ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ಸರ್ಕಾರದ ಕ್ರಮವನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಕಿಡಿಕಾರಿದ್ದಾರೆ. ಸಚಿವರ ಕಚೇರಿಯಲ್ಲಿ ನಡೆದ ಕಳ್ಳತನದ ಬಳಿಕ ಮಾಧ್ಯಮಗಳ ಮೇಲೆ ನಿರ್ಬಂಧ ತರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಈ ನಡುವೆ ಸಚಿವ ಚಲುವರಾಯ ಸ್ವಾಮಿ ಪ್ರತಿಕ್ರಿಯೆ ನೀಡಿ, ಈ ವಿಚಾರವನ್ನು ಸಿಎಂ ಗಮನಕ್ಕೆ ತಂದು ಮಾಧ್ಯಮಗಳಿಗೆ ಮುಕ್ತ ಅವಕಾಶ ಕಲ್ಪಿಸುವ ಬಗ್ಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಒಟ್ನಲ್ಲಿ ವಿಧಾನಸೌಧದೊಳಗಿನ ಈ ಹೊಸ ನಿಯಮ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
The Karnataka government has moved to impose fresh restrictions on media movement inside Vidhana Soudha following the ongoing Assembly session, citing security concerns.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm