ಶಿವಮೊಗ್ಗದಲ್ಲಿ ನಟ ವಿಜಯ್ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು

11-08-20 10:25 am       Headline Karnataka News Network   ಕರ್ನಾಟಕ

ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿರುವ ಘಟನೆ ಮಂಗಳವಾರ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ, ಆಗಸ್ಟ್ 11: ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿರುವ ಘಟನೆ ಮಂಗಳವಾರ ಶಿವಮೊಗ್ಗದಲ್ಲಿ ನಡೆದಿದೆ. ನಟ ವಿಜಯ್ ರಾಘವೇಂದ್ರ ಅವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾಗ ಈ ಅವಾಂತರ ನಡೆದಿದೆ.

ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿದ್ದಾರೆ ಎನ್ನಲಾಗಿದೆ. ನಂತರ ಎಚ್ಚೆತ್ತ ಬಂಕ್ ಸಿಬ್ಬಂದಿ ಹಾಗೂ ಮಾಲೀಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದರು.ಕಾರನ್ನು ಲಾರಿಯಲ್ಲಿ ಹಾಕಿ‌ ಸರ್ವೀಸ್ ಗೆ ಕಳುಹಿಸಲಾಗಿದೆ. ವಿಜಯ್ ರಾಘವೇಂದ್ರ‌ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು.