ಬ್ರೇಕಿಂಗ್ ನ್ಯೂಸ್
19-02-26 09:29 pm mangalore ಕರ್ನಾಟಕ
ಬೆಂಗಳೂರು, ಫೆ.19 ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದ ಹಿನ್ನೆಲೆಯಲ್ಲಿ ನೌಕರರ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆಯಲು ನಿರ್ಧರಿಸಿತು.
38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಬಾಕಿ ವೇತನ ನೀಡುವುದಾಗಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ ತೃಪ್ತಿ ತಂದಿಲ್ಲ. 38 ತಿಂಗಳ ಹಿಂಬಾಕಿ ಹಣ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕೆಎಸ್ಆರ್ಟಿಸಿ ಎಂಡಿ, ನೌಕರರ ಜತೆ ಚರ್ಚಿಸಿದರು. ಬಳಿಕ ಅಂತಿಮವಾಗಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ಸರ್ಕಾರಕ್ಕೆ ಮಾರ್ಚ್ 2ರ ಗಡುವು ನೀಡಿದ್ದು, ಮಾರ್ಚ್ 2ರೊಳಗಾಗಿ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೇ ಅರಸ್ ತಿಳಿಸಿದ್ದಾರೆ. ಆದ್ರೆ, ಇದಕ್ಕೆ ಸಾರಿಗೆ ನೌಕರರು ಆಕ್ಷೇಪ ವ್ಯಕ್ತಪಡಿಸಿದ್ದು, ಮುಷ್ಕರ ಮುಂದುವರಿಸುವಂತೆ ಆಗ್ರಹಿಸಿದ್ದಾರೆ. 38 ತಿಂಗಳ ಹಿಂದಿನ ಬಾಕಿ ಪೂರ್ತಿ ನೀಡಲೇಬೇಕು. ಅಲ್ಲದೆ, ವೇತನ ಪರಿಷ್ಕರಿಸಬೇಕು. ನಿರ್ಧಾರ ಕೈಗೊಳ್ಳಲು ಹತ್ತು ದಿನ ಸಮಯ ನೀಡಿದ್ದು, ಅಷ್ಟರಲ್ಲಿ ಆಗದೇ ಇದ್ದರೆ ಮಾರ್ಚ್ 02ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm