ಬ್ರೇಕಿಂಗ್ ನ್ಯೂಸ್
20-02-26 09:20 pm HK News Desk ಕರ್ನಾಟಕ
ಹಾಸನ,ಫೆ 20: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಶಕ್ತಿದೇವತೆ ಹಾಸನಾಂಬೆ ದೇವಸ್ಥಾನ ಉತ್ಸವ ಈ ಬಾರಿ ಭ್ರಷ್ಟಾಚಾರದ ಆರೋಪಗಳಿಂದ ಸುದ್ದಿಯಲ್ಲಿದೆ. ಕಳೆದ ವರ್ಷ ಲಕ್ಷಾಂತರ ಭಕ್ತರು ಹರಿದುಬಂದಿದ್ದ ಉತ್ಸವದ ವಿದ್ಯುತ್ ದೀಪಾಲಂಕಾರ ಟೆಂಡರ್ನಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಆರ್ಟಿಐ ಕಾರ್ಯಕರ್ತ ಮನು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ತನಿಖೆ ನಡೆಸಿದರು. ಲೋಕಾಯುಕ್ತ ಅಧಿಕಾರಿ ಗಾಯಿತ್ರಿ ದೂರುದಾರ ಮನು ಸಮ್ಮುಖದಲ್ಲೇ ಮಹಾನಗರ ಪಾಲಿಕೆ ಇಂಜಿನಿಯರ್ ಸುಜಾತಾ ಹಾಗೂ ನಿವೃತ್ತ ಇಂಜಿನಿಯರ್ ರಂಗಸ್ವಾಮಿ ಅವರನ್ನು ವಿಚಾರಣೆ ನಡೆಸಿ ಸಂಪೂರ್ಣ ಮಾಹಿತಿ ಕಲೆಹಾಕಿದರು.
ಮುಜರಾಯಿ ಇಲಾಖೆಯ ಗ್ರೇಡ್-ಒನ್ ದೇವಾಲಯವಾಗಿರುವ ಹಾಸನಾಂಬೆ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಒಬ್ಬನೇ ಗುತ್ತಿಗೆದಾರನಿಗೆ ದೀಪಾಲಂಕಾರ ಟೆಂಡರ್ ನೀಡಲಾಗುತ್ತಿದೆ ಎಂಬ ಆರೋಪ ಇದೆ. ವಿದ್ಯುತ್ ದೀಪಾಲಂಕಾರಕ್ಕೆ ಹಲವು ಗುತ್ತಿಗೆದಾರರು ಅರ್ಜಿ ಸಲ್ಲಿಸಿದ್ದರೂ, ನಿಯಮ ಪಾಲನೆ ಮಾಡದೆ ಒಬ್ಬರಿಗೇ ಅನುಕೂಲ ಮಾಡಿಕೊಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೀಪಾಲಂಕಾರದಲ್ಲೇ 15 ಲಕ್ಷಕ್ಕೂ ಅಧಿಕ ಮೊತ್ತದ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹಾಸನಾಂಬೆ ಉತ್ಸವದಲ್ಲಿ ಅನುಭವ ಹೊಂದಿದವರಿಗೆ ಮಾತ್ರ ಆದ್ಯತೆ ಎನ್ನುವ ಷರತ್ತು ಸೇರಿಸಿ, ಲೈಟಿಂಗ್ ಹಾಗೂ ಹೂವಿನ ಅಲಂಕಾರ ಸೇರಿದಂತೆ ಎಲ್ಲಾ ಕಾಮಗಾರಿಗೂ ಒಂದೇ ವ್ಯಕ್ತಿಗೆ ಗುತ್ತಿಗೆ ನೀಡಲಾಗಿದೆ. “ಖರೀದಿ ಮಾಡಿದರೆ ಇಷ್ಟೊಂದು ವೆಚ್ಚ ಆಗುವುದಿಲ್ಲ, ದುಂದು ವೆಚ್ಚ ಮಾಡಲಾಗಿದೆ” ಎಂದು ದೂರುದಾರ ಆರೋಪಿಸಿದ್ದಾರೆ.
ತನಿಖೆ ವೇಳೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿ ಅಸಮಾಧಾನ ವ್ಯಕ್ತಪಡಿಸಿ, ಸರಿಯಾದ ದಾಖಲೆ ನೀಡದಿದ್ದರೆ ವರದಿಯಲ್ಲಿ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲೋಕಾ ಅಧಿಕಾರಿಗಳ ಪ್ರಶ್ನೆಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
ಭಕ್ತರ ನಂಬಿಕೆಗೆ ಧಕ್ಕೆ ತರುವ ರೀತಿಯಲ್ಲಿ ಹಣ ದುರ್ಬಳಕೆ ನಡೆದಿದೆಯೇ ಎಂಬ ಪ್ರಶ್ನೆ ಈಗ ಜನಮನದಲ್ಲಿ ಮೂಡಿದ್ದು, ಲೋಕಾಯುಕ್ತ ತನಿಖೆ ಮುಂದಿನ ಹಂತದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm