ಬ್ರೇಕಿಂಗ್ ನ್ಯೂಸ್
20-02-26 09:20 pm HK News Desk ಕರ್ನಾಟಕ
ಹಾಸನ,ಫೆ 20: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಶಕ್ತಿದೇವತೆ ಹಾಸನಾಂಬೆ ದೇವಸ್ಥಾನ ಉತ್ಸವ ಈ ಬಾರಿ ಭ್ರಷ್ಟಾಚಾರದ ಆರೋಪಗಳಿಂದ ಸುದ್ದಿಯಲ್ಲಿದೆ. ಕಳೆದ ವರ್ಷ ಲಕ್ಷಾಂತರ ಭಕ್ತರು ಹರಿದುಬಂದಿದ್ದ ಉತ್ಸವದ ವಿದ್ಯುತ್ ದೀಪಾಲಂಕಾರ ಟೆಂಡರ್ನಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಆರ್ಟಿಐ ಕಾರ್ಯಕರ್ತ ಮನು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ತನಿಖೆ ನಡೆಸಿದರು. ಲೋಕಾಯುಕ್ತ ಅಧಿಕಾರಿ ಗಾಯಿತ್ರಿ ದೂರುದಾರ ಮನು ಸಮ್ಮುಖದಲ್ಲೇ ಮಹಾನಗರ ಪಾಲಿಕೆ ಇಂಜಿನಿಯರ್ ಸುಜಾತಾ ಹಾಗೂ ನಿವೃತ್ತ ಇಂಜಿನಿಯರ್ ರಂಗಸ್ವಾಮಿ ಅವರನ್ನು ವಿಚಾರಣೆ ನಡೆಸಿ ಸಂಪೂರ್ಣ ಮಾಹಿತಿ ಕಲೆಹಾಕಿದರು.
ಮುಜರಾಯಿ ಇಲಾಖೆಯ ಗ್ರೇಡ್-ಒನ್ ದೇವಾಲಯವಾಗಿರುವ ಹಾಸನಾಂಬೆ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಒಬ್ಬನೇ ಗುತ್ತಿಗೆದಾರನಿಗೆ ದೀಪಾಲಂಕಾರ ಟೆಂಡರ್ ನೀಡಲಾಗುತ್ತಿದೆ ಎಂಬ ಆರೋಪ ಇದೆ. ವಿದ್ಯುತ್ ದೀಪಾಲಂಕಾರಕ್ಕೆ ಹಲವು ಗುತ್ತಿಗೆದಾರರು ಅರ್ಜಿ ಸಲ್ಲಿಸಿದ್ದರೂ, ನಿಯಮ ಪಾಲನೆ ಮಾಡದೆ ಒಬ್ಬರಿಗೇ ಅನುಕೂಲ ಮಾಡಿಕೊಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೀಪಾಲಂಕಾರದಲ್ಲೇ 15 ಲಕ್ಷಕ್ಕೂ ಅಧಿಕ ಮೊತ್ತದ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹಾಸನಾಂಬೆ ಉತ್ಸವದಲ್ಲಿ ಅನುಭವ ಹೊಂದಿದವರಿಗೆ ಮಾತ್ರ ಆದ್ಯತೆ ಎನ್ನುವ ಷರತ್ತು ಸೇರಿಸಿ, ಲೈಟಿಂಗ್ ಹಾಗೂ ಹೂವಿನ ಅಲಂಕಾರ ಸೇರಿದಂತೆ ಎಲ್ಲಾ ಕಾಮಗಾರಿಗೂ ಒಂದೇ ವ್ಯಕ್ತಿಗೆ ಗುತ್ತಿಗೆ ನೀಡಲಾಗಿದೆ. “ಖರೀದಿ ಮಾಡಿದರೆ ಇಷ್ಟೊಂದು ವೆಚ್ಚ ಆಗುವುದಿಲ್ಲ, ದುಂದು ವೆಚ್ಚ ಮಾಡಲಾಗಿದೆ” ಎಂದು ದೂರುದಾರ ಆರೋಪಿಸಿದ್ದಾರೆ.
ತನಿಖೆ ವೇಳೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿ ಅಸಮಾಧಾನ ವ್ಯಕ್ತಪಡಿಸಿ, ಸರಿಯಾದ ದಾಖಲೆ ನೀಡದಿದ್ದರೆ ವರದಿಯಲ್ಲಿ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲೋಕಾ ಅಧಿಕಾರಿಗಳ ಪ್ರಶ್ನೆಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
ಭಕ್ತರ ನಂಬಿಕೆಗೆ ಧಕ್ಕೆ ತರುವ ರೀತಿಯಲ್ಲಿ ಹಣ ದುರ್ಬಳಕೆ ನಡೆದಿದೆಯೇ ಎಂಬ ಪ್ರಶ್ನೆ ಈಗ ಜನಮನದಲ್ಲಿ ಮೂಡಿದ್ದು, ಲೋಕಾಯುಕ್ತ ತನಿಖೆ ಮುಂದಿನ ಹಂತದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm