ಬ್ರೇಕಿಂಗ್ ನ್ಯೂಸ್
20-02-26 09:20 pm HK News Desk ಕರ್ನಾಟಕ
ಹಾಸನ,ಫೆ 20: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಶಕ್ತಿದೇವತೆ ಹಾಸನಾಂಬೆ ದೇವಸ್ಥಾನ ಉತ್ಸವ ಈ ಬಾರಿ ಭ್ರಷ್ಟಾಚಾರದ ಆರೋಪಗಳಿಂದ ಸುದ್ದಿಯಲ್ಲಿದೆ. ಕಳೆದ ವರ್ಷ ಲಕ್ಷಾಂತರ ಭಕ್ತರು ಹರಿದುಬಂದಿದ್ದ ಉತ್ಸವದ ವಿದ್ಯುತ್ ದೀಪಾಲಂಕಾರ ಟೆಂಡರ್ನಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಆರ್ಟಿಐ ಕಾರ್ಯಕರ್ತ ಮನು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ತನಿಖೆ ನಡೆಸಿದರು. ಲೋಕಾಯುಕ್ತ ಅಧಿಕಾರಿ ಗಾಯಿತ್ರಿ ದೂರುದಾರ ಮನು ಸಮ್ಮುಖದಲ್ಲೇ ಮಹಾನಗರ ಪಾಲಿಕೆ ಇಂಜಿನಿಯರ್ ಸುಜಾತಾ ಹಾಗೂ ನಿವೃತ್ತ ಇಂಜಿನಿಯರ್ ರಂಗಸ್ವಾಮಿ ಅವರನ್ನು ವಿಚಾರಣೆ ನಡೆಸಿ ಸಂಪೂರ್ಣ ಮಾಹಿತಿ ಕಲೆಹಾಕಿದರು.
ಮುಜರಾಯಿ ಇಲಾಖೆಯ ಗ್ರೇಡ್-ಒನ್ ದೇವಾಲಯವಾಗಿರುವ ಹಾಸನಾಂಬೆ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಒಬ್ಬನೇ ಗುತ್ತಿಗೆದಾರನಿಗೆ ದೀಪಾಲಂಕಾರ ಟೆಂಡರ್ ನೀಡಲಾಗುತ್ತಿದೆ ಎಂಬ ಆರೋಪ ಇದೆ. ವಿದ್ಯುತ್ ದೀಪಾಲಂಕಾರಕ್ಕೆ ಹಲವು ಗುತ್ತಿಗೆದಾರರು ಅರ್ಜಿ ಸಲ್ಲಿಸಿದ್ದರೂ, ನಿಯಮ ಪಾಲನೆ ಮಾಡದೆ ಒಬ್ಬರಿಗೇ ಅನುಕೂಲ ಮಾಡಿಕೊಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೀಪಾಲಂಕಾರದಲ್ಲೇ 15 ಲಕ್ಷಕ್ಕೂ ಅಧಿಕ ಮೊತ್ತದ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹಾಸನಾಂಬೆ ಉತ್ಸವದಲ್ಲಿ ಅನುಭವ ಹೊಂದಿದವರಿಗೆ ಮಾತ್ರ ಆದ್ಯತೆ ಎನ್ನುವ ಷರತ್ತು ಸೇರಿಸಿ, ಲೈಟಿಂಗ್ ಹಾಗೂ ಹೂವಿನ ಅಲಂಕಾರ ಸೇರಿದಂತೆ ಎಲ್ಲಾ ಕಾಮಗಾರಿಗೂ ಒಂದೇ ವ್ಯಕ್ತಿಗೆ ಗುತ್ತಿಗೆ ನೀಡಲಾಗಿದೆ. “ಖರೀದಿ ಮಾಡಿದರೆ ಇಷ್ಟೊಂದು ವೆಚ್ಚ ಆಗುವುದಿಲ್ಲ, ದುಂದು ವೆಚ್ಚ ಮಾಡಲಾಗಿದೆ” ಎಂದು ದೂರುದಾರ ಆರೋಪಿಸಿದ್ದಾರೆ.
ತನಿಖೆ ವೇಳೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿ ಅಸಮಾಧಾನ ವ್ಯಕ್ತಪಡಿಸಿ, ಸರಿಯಾದ ದಾಖಲೆ ನೀಡದಿದ್ದರೆ ವರದಿಯಲ್ಲಿ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲೋಕಾ ಅಧಿಕಾರಿಗಳ ಪ್ರಶ್ನೆಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
ಭಕ್ತರ ನಂಬಿಕೆಗೆ ಧಕ್ಕೆ ತರುವ ರೀತಿಯಲ್ಲಿ ಹಣ ದುರ್ಬಳಕೆ ನಡೆದಿದೆಯೇ ಎಂಬ ಪ್ರಶ್ನೆ ಈಗ ಜನಮನದಲ್ಲಿ ಮೂಡಿದ್ದು, ಲೋಕಾಯುಕ್ತ ತನಿಖೆ ಮುಂದಿನ ಹಂತದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm