ಬ್ರೇಕಿಂಗ್ ನ್ಯೂಸ್
20-02-26 09:20 pm HK News Desk ಕರ್ನಾಟಕ
ಹಾಸನ,ಫೆ 20: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಶಕ್ತಿದೇವತೆ ಹಾಸನಾಂಬೆ ದೇವಸ್ಥಾನ ಉತ್ಸವ ಈ ಬಾರಿ ಭ್ರಷ್ಟಾಚಾರದ ಆರೋಪಗಳಿಂದ ಸುದ್ದಿಯಲ್ಲಿದೆ. ಕಳೆದ ವರ್ಷ ಲಕ್ಷಾಂತರ ಭಕ್ತರು ಹರಿದುಬಂದಿದ್ದ ಉತ್ಸವದ ವಿದ್ಯುತ್ ದೀಪಾಲಂಕಾರ ಟೆಂಡರ್ನಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಆರ್ಟಿಐ ಕಾರ್ಯಕರ್ತ ಮನು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ತನಿಖೆ ನಡೆಸಿದರು. ಲೋಕಾಯುಕ್ತ ಅಧಿಕಾರಿ ಗಾಯಿತ್ರಿ ದೂರುದಾರ ಮನು ಸಮ್ಮುಖದಲ್ಲೇ ಮಹಾನಗರ ಪಾಲಿಕೆ ಇಂಜಿನಿಯರ್ ಸುಜಾತಾ ಹಾಗೂ ನಿವೃತ್ತ ಇಂಜಿನಿಯರ್ ರಂಗಸ್ವಾಮಿ ಅವರನ್ನು ವಿಚಾರಣೆ ನಡೆಸಿ ಸಂಪೂರ್ಣ ಮಾಹಿತಿ ಕಲೆಹಾಕಿದರು.
ಮುಜರಾಯಿ ಇಲಾಖೆಯ ಗ್ರೇಡ್-ಒನ್ ದೇವಾಲಯವಾಗಿರುವ ಹಾಸನಾಂಬೆ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಒಬ್ಬನೇ ಗುತ್ತಿಗೆದಾರನಿಗೆ ದೀಪಾಲಂಕಾರ ಟೆಂಡರ್ ನೀಡಲಾಗುತ್ತಿದೆ ಎಂಬ ಆರೋಪ ಇದೆ. ವಿದ್ಯುತ್ ದೀಪಾಲಂಕಾರಕ್ಕೆ ಹಲವು ಗುತ್ತಿಗೆದಾರರು ಅರ್ಜಿ ಸಲ್ಲಿಸಿದ್ದರೂ, ನಿಯಮ ಪಾಲನೆ ಮಾಡದೆ ಒಬ್ಬರಿಗೇ ಅನುಕೂಲ ಮಾಡಿಕೊಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೀಪಾಲಂಕಾರದಲ್ಲೇ 15 ಲಕ್ಷಕ್ಕೂ ಅಧಿಕ ಮೊತ್ತದ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹಾಸನಾಂಬೆ ಉತ್ಸವದಲ್ಲಿ ಅನುಭವ ಹೊಂದಿದವರಿಗೆ ಮಾತ್ರ ಆದ್ಯತೆ ಎನ್ನುವ ಷರತ್ತು ಸೇರಿಸಿ, ಲೈಟಿಂಗ್ ಹಾಗೂ ಹೂವಿನ ಅಲಂಕಾರ ಸೇರಿದಂತೆ ಎಲ್ಲಾ ಕಾಮಗಾರಿಗೂ ಒಂದೇ ವ್ಯಕ್ತಿಗೆ ಗುತ್ತಿಗೆ ನೀಡಲಾಗಿದೆ. “ಖರೀದಿ ಮಾಡಿದರೆ ಇಷ್ಟೊಂದು ವೆಚ್ಚ ಆಗುವುದಿಲ್ಲ, ದುಂದು ವೆಚ್ಚ ಮಾಡಲಾಗಿದೆ” ಎಂದು ದೂರುದಾರ ಆರೋಪಿಸಿದ್ದಾರೆ.
ತನಿಖೆ ವೇಳೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿ ಅಸಮಾಧಾನ ವ್ಯಕ್ತಪಡಿಸಿ, ಸರಿಯಾದ ದಾಖಲೆ ನೀಡದಿದ್ದರೆ ವರದಿಯಲ್ಲಿ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲೋಕಾ ಅಧಿಕಾರಿಗಳ ಪ್ರಶ್ನೆಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
ಭಕ್ತರ ನಂಬಿಕೆಗೆ ಧಕ್ಕೆ ತರುವ ರೀತಿಯಲ್ಲಿ ಹಣ ದುರ್ಬಳಕೆ ನಡೆದಿದೆಯೇ ಎಂಬ ಪ್ರಶ್ನೆ ಈಗ ಜನಮನದಲ್ಲಿ ಮೂಡಿದ್ದು, ಲೋಕಾಯುಕ್ತ ತನಿಖೆ ಮುಂದಿನ ಹಂತದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am