ಬ್ರೇಕಿಂಗ್ ನ್ಯೂಸ್
23-02-26 11:14 am HK News Staffer ಕರ್ನಾಟಕ
ಕಾರವಾರ, ಫೆ.23: ಬಹು ನಿರೀಕ್ಷಿತ ಜಿಲ್ಲಾ, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಿ ಚುನಾವಣೆಯನ್ನು ಇದೇ ಜೂನ್ ತಿಂಗಳ ಒಳಗೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆ ಬಳಿಕವೇ ಸ್ಥಳೀಯ ಸಂಸ್ಥೆಗಳ ಮೇಲ್ದರ್ಜೆಗೇರಿಸುವ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಗಂಗಾವಳಿ ಸೇತುವೆ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ''ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಈಗಾಗಲೇ ವಿವಿಧ ಪ್ರಕ್ರಿಯೆ ನಡೆಸಲಾಗುತ್ತಿದೆ. ಜನಸಂಖ್ಯೆ ಆಧರಿಸಿ ವಾರ್ಡ್ಗಳನ್ನು ವಿಂಗಡನೆ ಕಾರ್ಯ ಮಾಡಬೇಕಾಗಿದೆ ಎಂದರು. ಯಾವೆಲ್ಲ ಸ್ಥಳೀಯ ಸಂಸ್ಥೆಗಳು ಮೇಲ್ದರ್ಜೆಗೆ ಏರಿಸಬೇಕು ಎಂಬ ವಿಷಯವನ್ನು ಚುನಾವಣೆ ನಂತರ ಗಮನಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾದ ಮಂಜಗುಣಿ - ಗಂಗಾವಳಿ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. 2018ರಲ್ಲಿ ಈ ಸೇತುವೆಗೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ನಂತರ ಬಂದ ಸರಕಾರ ಐದು ವರ್ಷ ಸೇತುವೆ ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ಮಾಡಿತ್ತು. ಮತ್ತೆ ನಮ್ಮ ಸರಕಾರ ಬಂದ ನಂತರ ಕಾಮಗಾರಿ ಮುಂದುವರಿಸಿ ಈಗ ಉದ್ಘಾಟಿಸಿದ್ದೇವೆ. ಆ ಸಮಯದಲ್ಲಿ 28 ಕೋಟಿ ಇದ್ದ ಅಂದಾಜು ಹೆಚ್ಚು, ಈಗ 35 ಕೋಟಿಗೆ ಏರಿಕೆಯಾಗಿದೆ. ಸೇತುವೆ ನಿರ್ಮಾಣದಿಂದ ಈ ಭಾಗದ ಜನರಿಗೆ 18 ಕಿ.ಮೀ ಸಂಚಾರ ಕಡಿಮೆಯಾಗಲಿದೆ ಎಂದು ಸಿಎಂ ನುಡಿದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, 334 ಕಿ.ಮೀ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ನಿಯಮಗಳನ್ನು ಜಾರಿಗೊಳಿಸಲಾಗುವುದು. ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದರ ಜತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಸ್ಥಳೀಯರು ಉದ್ಯೋಗವನ್ನು ಆರಿಸಿ ಹೊರಗಡೆ ಹೋಗುವುದರ ಬದಲು ಇಲ್ಲಿಯೇ ತಮ್ಮ ಉದ್ಯೋಗವನ್ನು ಕಂಡುಕೊಳ್ಳಬೇಕು ಎಂದರು.
Chief Minister Siddaramaiah on Sunday assured that the long-pending elections to district, taluk, and gram panchayats will be conducted within the month of June. He said the process of upgrading local bodies would be taken up only after the completion of the elections.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 09:07 pm
HK News Staffer
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm