ಬ್ರೇಕಿಂಗ್ ನ್ಯೂಸ್
23-02-26 11:14 am HK News Staffer ಕರ್ನಾಟಕ
ಕಾರವಾರ, ಫೆ.23: ಬಹು ನಿರೀಕ್ಷಿತ ಜಿಲ್ಲಾ, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಿ ಚುನಾವಣೆಯನ್ನು ಇದೇ ಜೂನ್ ತಿಂಗಳ ಒಳಗೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆ ಬಳಿಕವೇ ಸ್ಥಳೀಯ ಸಂಸ್ಥೆಗಳ ಮೇಲ್ದರ್ಜೆಗೇರಿಸುವ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಗಂಗಾವಳಿ ಸೇತುವೆ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ''ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಈಗಾಗಲೇ ವಿವಿಧ ಪ್ರಕ್ರಿಯೆ ನಡೆಸಲಾಗುತ್ತಿದೆ. ಜನಸಂಖ್ಯೆ ಆಧರಿಸಿ ವಾರ್ಡ್ಗಳನ್ನು ವಿಂಗಡನೆ ಕಾರ್ಯ ಮಾಡಬೇಕಾಗಿದೆ ಎಂದರು. ಯಾವೆಲ್ಲ ಸ್ಥಳೀಯ ಸಂಸ್ಥೆಗಳು ಮೇಲ್ದರ್ಜೆಗೆ ಏರಿಸಬೇಕು ಎಂಬ ವಿಷಯವನ್ನು ಚುನಾವಣೆ ನಂತರ ಗಮನಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾದ ಮಂಜಗುಣಿ - ಗಂಗಾವಳಿ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. 2018ರಲ್ಲಿ ಈ ಸೇತುವೆಗೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ನಂತರ ಬಂದ ಸರಕಾರ ಐದು ವರ್ಷ ಸೇತುವೆ ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ಮಾಡಿತ್ತು. ಮತ್ತೆ ನಮ್ಮ ಸರಕಾರ ಬಂದ ನಂತರ ಕಾಮಗಾರಿ ಮುಂದುವರಿಸಿ ಈಗ ಉದ್ಘಾಟಿಸಿದ್ದೇವೆ. ಆ ಸಮಯದಲ್ಲಿ 28 ಕೋಟಿ ಇದ್ದ ಅಂದಾಜು ಹೆಚ್ಚು, ಈಗ 35 ಕೋಟಿಗೆ ಏರಿಕೆಯಾಗಿದೆ. ಸೇತುವೆ ನಿರ್ಮಾಣದಿಂದ ಈ ಭಾಗದ ಜನರಿಗೆ 18 ಕಿ.ಮೀ ಸಂಚಾರ ಕಡಿಮೆಯಾಗಲಿದೆ ಎಂದು ಸಿಎಂ ನುಡಿದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, 334 ಕಿ.ಮೀ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ನಿಯಮಗಳನ್ನು ಜಾರಿಗೊಳಿಸಲಾಗುವುದು. ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದರ ಜತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಸ್ಥಳೀಯರು ಉದ್ಯೋಗವನ್ನು ಆರಿಸಿ ಹೊರಗಡೆ ಹೋಗುವುದರ ಬದಲು ಇಲ್ಲಿಯೇ ತಮ್ಮ ಉದ್ಯೋಗವನ್ನು ಕಂಡುಕೊಳ್ಳಬೇಕು ಎಂದರು.
Chief Minister Siddaramaiah on Sunday assured that the long-pending elections to district, taluk, and gram panchayats will be conducted within the month of June. He said the process of upgrading local bodies would be taken up only after the completion of the elections.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm