ಬ್ರೇಕಿಂಗ್ ನ್ಯೂಸ್
23-02-26 11:14 am HK News Staffer ಕರ್ನಾಟಕ
ಕಾರವಾರ, ಫೆ.23: ಬಹು ನಿರೀಕ್ಷಿತ ಜಿಲ್ಲಾ, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಿ ಚುನಾವಣೆಯನ್ನು ಇದೇ ಜೂನ್ ತಿಂಗಳ ಒಳಗೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆ ಬಳಿಕವೇ ಸ್ಥಳೀಯ ಸಂಸ್ಥೆಗಳ ಮೇಲ್ದರ್ಜೆಗೇರಿಸುವ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಗಂಗಾವಳಿ ಸೇತುವೆ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ''ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಈಗಾಗಲೇ ವಿವಿಧ ಪ್ರಕ್ರಿಯೆ ನಡೆಸಲಾಗುತ್ತಿದೆ. ಜನಸಂಖ್ಯೆ ಆಧರಿಸಿ ವಾರ್ಡ್ಗಳನ್ನು ವಿಂಗಡನೆ ಕಾರ್ಯ ಮಾಡಬೇಕಾಗಿದೆ ಎಂದರು. ಯಾವೆಲ್ಲ ಸ್ಥಳೀಯ ಸಂಸ್ಥೆಗಳು ಮೇಲ್ದರ್ಜೆಗೆ ಏರಿಸಬೇಕು ಎಂಬ ವಿಷಯವನ್ನು ಚುನಾವಣೆ ನಂತರ ಗಮನಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾದ ಮಂಜಗುಣಿ - ಗಂಗಾವಳಿ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. 2018ರಲ್ಲಿ ಈ ಸೇತುವೆಗೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ನಂತರ ಬಂದ ಸರಕಾರ ಐದು ವರ್ಷ ಸೇತುವೆ ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ಮಾಡಿತ್ತು. ಮತ್ತೆ ನಮ್ಮ ಸರಕಾರ ಬಂದ ನಂತರ ಕಾಮಗಾರಿ ಮುಂದುವರಿಸಿ ಈಗ ಉದ್ಘಾಟಿಸಿದ್ದೇವೆ. ಆ ಸಮಯದಲ್ಲಿ 28 ಕೋಟಿ ಇದ್ದ ಅಂದಾಜು ಹೆಚ್ಚು, ಈಗ 35 ಕೋಟಿಗೆ ಏರಿಕೆಯಾಗಿದೆ. ಸೇತುವೆ ನಿರ್ಮಾಣದಿಂದ ಈ ಭಾಗದ ಜನರಿಗೆ 18 ಕಿ.ಮೀ ಸಂಚಾರ ಕಡಿಮೆಯಾಗಲಿದೆ ಎಂದು ಸಿಎಂ ನುಡಿದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, 334 ಕಿ.ಮೀ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ನಿಯಮಗಳನ್ನು ಜಾರಿಗೊಳಿಸಲಾಗುವುದು. ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದರ ಜತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಸ್ಥಳೀಯರು ಉದ್ಯೋಗವನ್ನು ಆರಿಸಿ ಹೊರಗಡೆ ಹೋಗುವುದರ ಬದಲು ಇಲ್ಲಿಯೇ ತಮ್ಮ ಉದ್ಯೋಗವನ್ನು ಕಂಡುಕೊಳ್ಳಬೇಕು ಎಂದರು.
Chief Minister Siddaramaiah on Sunday assured that the long-pending elections to district, taluk, and gram panchayats will be conducted within the month of June. He said the process of upgrading local bodies would be taken up only after the completion of the elections.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm