ಬ್ರೇಕಿಂಗ್ ನ್ಯೂಸ್
23-02-26 05:15 pm HK News Staffer ಕರ್ನಾಟಕ
ಬೆಂಗಳೂರು, ಫೆ.23: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆಗೆ ಒತ್ತಾಯಿಸಿ ಸುಮಾರು 31ಕ್ಕೂ ಹೆಚ್ಚು ಮೊದಲ ಬಾರಿಗೆ ಗೆದ್ದ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದು ಪತ್ರ ಮಾಧ್ಯಮಕ್ಕೆ ಲೀಕ್ ಆಗಿದೆ.
ಯುವ ಮತ್ತು ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಸಿಎಂ ಗಾದಿಯ ಗೊಂದಲವನ್ನು ಶೀಘ್ರವೇ ಪರಿಹರಿಸಬೇಕು ಎಂದು ಒತ್ತಾಯಿಸಿ ಹೈಕಮಾಂಡ್ ನಾಯಕರಿಗೆ ಪತ್ರದ ಮೂಲಕ ಒತ್ತಾಯಿಸಲಾಗಿದೆ. ಪತ್ರಕ್ಕೆ ಮಂಡ್ಯ ಶಾಸಕ ಗಣಿಗ ರವಿಕುಮಾರ್, ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ, ಪುತ್ತೂರು ಶಾಸಕ ಅಶೋಕ್ ರೈ, ಎಸಿ ಶ್ರೀನಿವಾಸ್, ಇಕ್ಬಾಲ್ ಹುಸೇನ್, ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ಪ್ರಕಾಶ್ ಕೋಳಿವಾಡ ಸೇರಿದಂತೆ ಹೊಸತಾಗಿ ಆಯ್ಕೆಯಾಗಿರುವ ಶಾಸಕರು ಸಹಿ ಮಾಡಿದ್ದಾರೆ.
ಕಳೆದ ಅಧಿವೇಶನ ಸಂದರ್ಭದಲ್ಲಿ ಈ ಪತ್ರ ಬರೆಯಲಾಗಿತ್ತು ಎನ್ನುವ ಮಾಹಿತಿಗಳಿದ್ದು ಯುವ ಶಾಸಕರಿಗೆ ಸಚಿವ ಸ್ಥಾನ ಕೊಡುವಂತೆ ಒತ್ತಾಯ ಮಾಡಿದ್ದಾರೆ. ಅತಿ ಹೆಚ್ಚು ಸ್ಥಾನಗಳಿಂದ ಗೆದ್ದಿದ್ದರೂ ಕಳೆದ ಬಾರಿ ಯಾರೊಬ್ಬ ಹೊಸ ಶಾಸಕನಿಗೂ ಸಚಿವ ಸ್ಥಾನ ನೀಡಿಲ್ಲ. ಇದರಿಂದಾಗಿ ನಾವು ನಿರಾಸೆಯಲ್ಲಿದ್ದೇವೆ, ನಾವು 38 ಮಂದಿ ಹೊಸದಾಗಿ ಆಯ್ಕೆ ಆಗಿದ್ದೇವೆ. ಮೊದಲ ಬಾರಿ ಶಾಸಕರಾದ ಕನಿಷ್ಠ ಐವರಿಗೆ ಸಚಿವ ಸ್ಥಾನ ಕೊಡಿ ಎಂದು ಪತ್ರ ಬರೆಯಲಾಗಿದೆ.
ಮೊದಲ ಬಾರಿಯ ಶಾಸಕರು ಸಂಪುಟದಲ್ಲಿ ಸ್ಥಾನ ನೀಡಲು ಒತ್ತಾಯಿಸಿ, ಇದನ್ನು "ಕಾಲದ ಅವಶ್ಯಕತೆ" ಎಂದು ಕರೆದುಕೊಂಡಿದ್ದು ನಾಯಕತ್ವ ಬದಲಾವಣೆ ಚರ್ಚೆಯ ನಡುವಲ್ಲೇ ಈ ರೀತಿಯ ಪತ್ರ ವೈರಲ್ ಆಗಿದೆ. ಸಚಿವ ಸತೀಶ್ ಜಾರಕಿಹೊಳಿ ಸೇರಿ ಹಿರಿಯ ಶಾಸಕರು ಸಿಎಂ ಸ್ಥಾನದ ಗೊಂದಲವನ್ನು ಶೀಘ್ರವೇ ಬಗೆಹರಿಸಬೇಕು ಎಂದು ಒತ್ತಾಯ ಮಾಡುತ್ತಿದ್ದರೆ, ಹೊಸ ಶಾಸಕರು ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡುವಂತೆ ಹೈಕಮಾಂಡ್ಗೆ ಆಗ್ರಹಿಸುತ್ತಿದ್ದಾರೆ.
ಪತ್ರವನ್ನು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರಿಗೆ ಸಲ್ಲಿಸಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm