ಬ್ರೇಕಿಂಗ್ ನ್ಯೂಸ್
23-02-26 05:15 pm HK News Staffer ಕರ್ನಾಟಕ
ಬೆಂಗಳೂರು, ಫೆ.23: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆಗೆ ಒತ್ತಾಯಿಸಿ ಸುಮಾರು 31ಕ್ಕೂ ಹೆಚ್ಚು ಮೊದಲ ಬಾರಿಗೆ ಗೆದ್ದ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದು ಪತ್ರ ಮಾಧ್ಯಮಕ್ಕೆ ಲೀಕ್ ಆಗಿದೆ.
ಯುವ ಮತ್ತು ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಸಿಎಂ ಗಾದಿಯ ಗೊಂದಲವನ್ನು ಶೀಘ್ರವೇ ಪರಿಹರಿಸಬೇಕು ಎಂದು ಒತ್ತಾಯಿಸಿ ಹೈಕಮಾಂಡ್ ನಾಯಕರಿಗೆ ಪತ್ರದ ಮೂಲಕ ಒತ್ತಾಯಿಸಲಾಗಿದೆ. ಪತ್ರಕ್ಕೆ ಮಂಡ್ಯ ಶಾಸಕ ಗಣಿಗ ರವಿಕುಮಾರ್, ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ, ಪುತ್ತೂರು ಶಾಸಕ ಅಶೋಕ್ ರೈ, ಎಸಿ ಶ್ರೀನಿವಾಸ್, ಇಕ್ಬಾಲ್ ಹುಸೇನ್, ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ಪ್ರಕಾಶ್ ಕೋಳಿವಾಡ ಸೇರಿದಂತೆ ಹೊಸತಾಗಿ ಆಯ್ಕೆಯಾಗಿರುವ ಶಾಸಕರು ಸಹಿ ಮಾಡಿದ್ದಾರೆ.
ಕಳೆದ ಅಧಿವೇಶನ ಸಂದರ್ಭದಲ್ಲಿ ಈ ಪತ್ರ ಬರೆಯಲಾಗಿತ್ತು ಎನ್ನುವ ಮಾಹಿತಿಗಳಿದ್ದು ಯುವ ಶಾಸಕರಿಗೆ ಸಚಿವ ಸ್ಥಾನ ಕೊಡುವಂತೆ ಒತ್ತಾಯ ಮಾಡಿದ್ದಾರೆ. ಅತಿ ಹೆಚ್ಚು ಸ್ಥಾನಗಳಿಂದ ಗೆದ್ದಿದ್ದರೂ ಕಳೆದ ಬಾರಿ ಯಾರೊಬ್ಬ ಹೊಸ ಶಾಸಕನಿಗೂ ಸಚಿವ ಸ್ಥಾನ ನೀಡಿಲ್ಲ. ಇದರಿಂದಾಗಿ ನಾವು ನಿರಾಸೆಯಲ್ಲಿದ್ದೇವೆ, ನಾವು 38 ಮಂದಿ ಹೊಸದಾಗಿ ಆಯ್ಕೆ ಆಗಿದ್ದೇವೆ. ಮೊದಲ ಬಾರಿ ಶಾಸಕರಾದ ಕನಿಷ್ಠ ಐವರಿಗೆ ಸಚಿವ ಸ್ಥಾನ ಕೊಡಿ ಎಂದು ಪತ್ರ ಬರೆಯಲಾಗಿದೆ.
ಮೊದಲ ಬಾರಿಯ ಶಾಸಕರು ಸಂಪುಟದಲ್ಲಿ ಸ್ಥಾನ ನೀಡಲು ಒತ್ತಾಯಿಸಿ, ಇದನ್ನು "ಕಾಲದ ಅವಶ್ಯಕತೆ" ಎಂದು ಕರೆದುಕೊಂಡಿದ್ದು ನಾಯಕತ್ವ ಬದಲಾವಣೆ ಚರ್ಚೆಯ ನಡುವಲ್ಲೇ ಈ ರೀತಿಯ ಪತ್ರ ವೈರಲ್ ಆಗಿದೆ. ಸಚಿವ ಸತೀಶ್ ಜಾರಕಿಹೊಳಿ ಸೇರಿ ಹಿರಿಯ ಶಾಸಕರು ಸಿಎಂ ಸ್ಥಾನದ ಗೊಂದಲವನ್ನು ಶೀಘ್ರವೇ ಬಗೆಹರಿಸಬೇಕು ಎಂದು ಒತ್ತಾಯ ಮಾಡುತ್ತಿದ್ದರೆ, ಹೊಸ ಶಾಸಕರು ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡುವಂತೆ ಹೈಕಮಾಂಡ್ಗೆ ಆಗ್ರಹಿಸುತ್ತಿದ್ದಾರೆ.
ಪತ್ರವನ್ನು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರಿಗೆ ಸಲ್ಲಿಸಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm