ಬ್ರೇಕಿಂಗ್ ನ್ಯೂಸ್
24-02-26 03:51 pm HK News Staffer ಕರ್ನಾಟಕ
ಬೆಂಗಳೂರು, ಫೆ.23: ರಾಜ್ಯದ ಮಾರುಕಟ್ಟೆಗೆ ಬರುವ ಬಹುತೇಕ ತರಕಾರಿಗಳಲ್ಲಿ ಸೀಸ ಮತ್ತು ಇನ್ನಿತರ ಮಾರಕ ರಾಸಾಯನಿಕ ಪ್ರಮಾಣ ಹೇರಳವಾಗಿ ಕಂಡುಬಂದಿದ್ದು, ಆತಂಕ ಮೂಡಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯಾದ್ಯಂತ 70ಕ್ಕೂ ಹೆಚ್ಚು ತರಕಾರಿ ಸ್ಯಾಂಪಲ್ಗಳನ್ನು ತಂದು ಪರಿಶೀಲಿಸಿದಾಗ 19 ಮಾದರಿಗಳಲ್ಲಿ ಅತಿಯಾದ ಸೀಸದ ಪ್ರಮಾಣ ಇರುವುದು ಪತ್ತೆಯಾಗಿದೆ.
ಕೆಲವು ವರ್ಷಗಳ ಹಿಂದೆಯೂ ತರಕಾರಿಗಳಲ್ಲಿ ಭಾರಿ ಲೋಹಗಳ ಅಂಶ ಪತ್ತೆಯಾಗಿದೆ ಎಂದು ಅಧ್ಯಯನ ವರದಿ ಪ್ರಕಟವಾಗಿತ್ತು. 2023ರ ಅಕ್ಟೋಬರ್ 25ರಂದು ಇಎಂಪಿಇ ಸಂಸ್ಥೆ 400 ಮಾದರಿಗಳ ಪರಿಶೀಲನೆ ನಡೆಸಿ, ಸೀಸ ಸೇರಿದಂತೆ ಭಾರೀ ಲೋಹಗಳು ಮಣ್ಣಿನಲ್ಲೇ ಅಸ್ತಿತ್ವವಿದೆ ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, CPCBಗೆ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ಆದರೀಗ ಮತ್ತೊಮ್ಮೆ ಮಾಡಿದ ಅಧ್ಯಯನದಿಂದ ರಾಜ್ಯದ ವಿವಿಧ ಭಾಗದ ತರಕಾರಿಗಳಲ್ಲಿ ಸೀಸದ ಪ್ರಮಾಣ ಹೆಚ್ಚಿರುವುದು ಕಂಡುಬಂದಿದೆ.
ನೆಲಮಂಗಲ, ರಾಜಾಜಿನಗರ, ಕೋಲಾರ ಮಾರುಕಟ್ಟೆಗಳಿಂದ 53 ಮಾದರಿಗಳು ಹಾಗೂ ನೆಲಮಂಗಲ, ಕೋಲಾರ, ಚಿಕ್ಕಬಳ್ಳಾಪುರ ಕೃಷಿ ಕ್ಷೇತ್ರಗಳಿಂದ ಉಳಿದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಸೀಸ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದೆ. ತರಕಾರಿ ಮಾದರಿಗಳಲ್ಲಿ 19 ಮಾದರಿಗಳು ಮಾನದಂಡಕ್ಕಿಂತ ಹೆಚ್ಚು ಸೀಸದ ಅಂಶ ಹೊಂದಿರುವುದು ಪ್ರಯೋಗಾಲಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ.
ಆರ್ಗ್ಯಾನಿಕ್ ಎಂದು ಮಾರಾಟವಾಗಿದ್ದ ಬದನೆಕಾಯಿಯಲ್ಲಿ 1.953 ಮಿ.ಗ್ರಾಂ/ಕೆಜಿ ಸೀಸ ಪತ್ತೆಯಾಗಿದ್ದು, ಇದು ನಿಗದಿತ 0.1 ಮಿ.ಗ್ರಾಂ ಮಿತಿಗಿಂತ 20 ಪಟ್ಟು ಹೆಚ್ಚಾಗಿದೆ. ತೊಂಡೆಕಾಯಿ, ಅವರೆಕಾಯಿ, ಸೊಪ್ಪು, ಕೋಸು ಸೇರಿದಂತೆ ಹಲವು ತರಕಾರಿಗಳಲ್ಲೂ ಮಿತಿಗಿಂತ ಹಲವು ಪಟ್ಟು ಅಧಿಕ ಸೀಸ ಕಂಡುಬಂದಿದೆ. ಸೌತೆಕಾಯಿ, ಹೀರೇಕಾಯಿ, ಕ್ಯಾಪ್ಸಿಕಂ, ಬೀಟ್ರೂಟ್, ಹಾಗಲಕಾಯಿ, ಶಲಗಂ, ಸ್ಕ್ವಾಶ್ ಮತ್ತು ಮೆಣಸಿನಕಾಯಿ ಮಾದರಿಗಳಲ್ಲೂ ಅತಿಯಾದ ರಾಸಾಯನಿಕ ಪತ್ತೆಯಾಗಿದೆ.
ಭಾರೀ ವಿಷಕಾರಿ ಕೀಟನಾಶಕವಾದ ಮೊನೋಕ್ರೋಟೊಫೋಸ್ ಕೂಡ ಪತ್ತೆಯಾಗಿದೆ. ದೇಶದಲ್ಲಿ 2023ರಲ್ಲಿ ಈ ಕೀಟನಾಶಕ ಬಳಕೆಯನ್ನು ನಿಷೇಧಿಸಿದ್ದರೂ ತರಕಾರಿಗಳಲ್ಲಿ ನಿಷೇಧಿತ ರಾಸಾಯನಿಕ ಪತ್ತೆಯಾಗಿದೆ. ಮೆಣಸಿನಕಾಯಿ ಮಾದರಿಗಳಲ್ಲಿ ನಿಗದಿತ 0.2 ಮಿ.ಗ್ರಾಂ/ಕೆಜಿ ಮಿತಿಗಿಂತ ಎರಡು ಪಟ್ಟು ಹೆಚ್ಚು ಮೊನೋಕ್ರೋಟೊಫೋಸ್ ಕಂಡುಬಂದಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm