ಬ್ರೇಕಿಂಗ್ ನ್ಯೂಸ್
24-02-26 03:51 pm HK News Staffer ಕರ್ನಾಟಕ
ಬೆಂಗಳೂರು, ಫೆ.23: ರಾಜ್ಯದ ಮಾರುಕಟ್ಟೆಗೆ ಬರುವ ಬಹುತೇಕ ತರಕಾರಿಗಳಲ್ಲಿ ಸೀಸ ಮತ್ತು ಇನ್ನಿತರ ಮಾರಕ ರಾಸಾಯನಿಕ ಪ್ರಮಾಣ ಹೇರಳವಾಗಿ ಕಂಡುಬಂದಿದ್ದು, ಆತಂಕ ಮೂಡಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯಾದ್ಯಂತ 70ಕ್ಕೂ ಹೆಚ್ಚು ತರಕಾರಿ ಸ್ಯಾಂಪಲ್ಗಳನ್ನು ತಂದು ಪರಿಶೀಲಿಸಿದಾಗ 19 ಮಾದರಿಗಳಲ್ಲಿ ಅತಿಯಾದ ಸೀಸದ ಪ್ರಮಾಣ ಇರುವುದು ಪತ್ತೆಯಾಗಿದೆ.
ಕೆಲವು ವರ್ಷಗಳ ಹಿಂದೆಯೂ ತರಕಾರಿಗಳಲ್ಲಿ ಭಾರಿ ಲೋಹಗಳ ಅಂಶ ಪತ್ತೆಯಾಗಿದೆ ಎಂದು ಅಧ್ಯಯನ ವರದಿ ಪ್ರಕಟವಾಗಿತ್ತು. 2023ರ ಅಕ್ಟೋಬರ್ 25ರಂದು ಇಎಂಪಿಇ ಸಂಸ್ಥೆ 400 ಮಾದರಿಗಳ ಪರಿಶೀಲನೆ ನಡೆಸಿ, ಸೀಸ ಸೇರಿದಂತೆ ಭಾರೀ ಲೋಹಗಳು ಮಣ್ಣಿನಲ್ಲೇ ಅಸ್ತಿತ್ವವಿದೆ ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, CPCBಗೆ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ಆದರೀಗ ಮತ್ತೊಮ್ಮೆ ಮಾಡಿದ ಅಧ್ಯಯನದಿಂದ ರಾಜ್ಯದ ವಿವಿಧ ಭಾಗದ ತರಕಾರಿಗಳಲ್ಲಿ ಸೀಸದ ಪ್ರಮಾಣ ಹೆಚ್ಚಿರುವುದು ಕಂಡುಬಂದಿದೆ.
ನೆಲಮಂಗಲ, ರಾಜಾಜಿನಗರ, ಕೋಲಾರ ಮಾರುಕಟ್ಟೆಗಳಿಂದ 53 ಮಾದರಿಗಳು ಹಾಗೂ ನೆಲಮಂಗಲ, ಕೋಲಾರ, ಚಿಕ್ಕಬಳ್ಳಾಪುರ ಕೃಷಿ ಕ್ಷೇತ್ರಗಳಿಂದ ಉಳಿದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಸೀಸ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದೆ. ತರಕಾರಿ ಮಾದರಿಗಳಲ್ಲಿ 19 ಮಾದರಿಗಳು ಮಾನದಂಡಕ್ಕಿಂತ ಹೆಚ್ಚು ಸೀಸದ ಅಂಶ ಹೊಂದಿರುವುದು ಪ್ರಯೋಗಾಲಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ.
ಆರ್ಗ್ಯಾನಿಕ್ ಎಂದು ಮಾರಾಟವಾಗಿದ್ದ ಬದನೆಕಾಯಿಯಲ್ಲಿ 1.953 ಮಿ.ಗ್ರಾಂ/ಕೆಜಿ ಸೀಸ ಪತ್ತೆಯಾಗಿದ್ದು, ಇದು ನಿಗದಿತ 0.1 ಮಿ.ಗ್ರಾಂ ಮಿತಿಗಿಂತ 20 ಪಟ್ಟು ಹೆಚ್ಚಾಗಿದೆ. ತೊಂಡೆಕಾಯಿ, ಅವರೆಕಾಯಿ, ಸೊಪ್ಪು, ಕೋಸು ಸೇರಿದಂತೆ ಹಲವು ತರಕಾರಿಗಳಲ್ಲೂ ಮಿತಿಗಿಂತ ಹಲವು ಪಟ್ಟು ಅಧಿಕ ಸೀಸ ಕಂಡುಬಂದಿದೆ. ಸೌತೆಕಾಯಿ, ಹೀರೇಕಾಯಿ, ಕ್ಯಾಪ್ಸಿಕಂ, ಬೀಟ್ರೂಟ್, ಹಾಗಲಕಾಯಿ, ಶಲಗಂ, ಸ್ಕ್ವಾಶ್ ಮತ್ತು ಮೆಣಸಿನಕಾಯಿ ಮಾದರಿಗಳಲ್ಲೂ ಅತಿಯಾದ ರಾಸಾಯನಿಕ ಪತ್ತೆಯಾಗಿದೆ.
ಭಾರೀ ವಿಷಕಾರಿ ಕೀಟನಾಶಕವಾದ ಮೊನೋಕ್ರೋಟೊಫೋಸ್ ಕೂಡ ಪತ್ತೆಯಾಗಿದೆ. ದೇಶದಲ್ಲಿ 2023ರಲ್ಲಿ ಈ ಕೀಟನಾಶಕ ಬಳಕೆಯನ್ನು ನಿಷೇಧಿಸಿದ್ದರೂ ತರಕಾರಿಗಳಲ್ಲಿ ನಿಷೇಧಿತ ರಾಸಾಯನಿಕ ಪತ್ತೆಯಾಗಿದೆ. ಮೆಣಸಿನಕಾಯಿ ಮಾದರಿಗಳಲ್ಲಿ ನಿಗದಿತ 0.2 ಮಿ.ಗ್ರಾಂ/ಕೆಜಿ ಮಿತಿಗಿಂತ ಎರಡು ಪಟ್ಟು ಹೆಚ್ಚು ಮೊನೋಕ್ರೋಟೊಫೋಸ್ ಕಂಡುಬಂದಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm