ಬ್ರೇಕಿಂಗ್ ನ್ಯೂಸ್
24-02-26 03:51 pm HK News Staffer ಕರ್ನಾಟಕ
ಬೆಂಗಳೂರು, ಫೆ.23: ರಾಜ್ಯದ ಮಾರುಕಟ್ಟೆಗೆ ಬರುವ ಬಹುತೇಕ ತರಕಾರಿಗಳಲ್ಲಿ ಸೀಸ ಮತ್ತು ಇನ್ನಿತರ ಮಾರಕ ರಾಸಾಯನಿಕ ಪ್ರಮಾಣ ಹೇರಳವಾಗಿ ಕಂಡುಬಂದಿದ್ದು, ಆತಂಕ ಮೂಡಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯಾದ್ಯಂತ 70ಕ್ಕೂ ಹೆಚ್ಚು ತರಕಾರಿ ಸ್ಯಾಂಪಲ್ಗಳನ್ನು ತಂದು ಪರಿಶೀಲಿಸಿದಾಗ 19 ಮಾದರಿಗಳಲ್ಲಿ ಅತಿಯಾದ ಸೀಸದ ಪ್ರಮಾಣ ಇರುವುದು ಪತ್ತೆಯಾಗಿದೆ.
ಕೆಲವು ವರ್ಷಗಳ ಹಿಂದೆಯೂ ತರಕಾರಿಗಳಲ್ಲಿ ಭಾರಿ ಲೋಹಗಳ ಅಂಶ ಪತ್ತೆಯಾಗಿದೆ ಎಂದು ಅಧ್ಯಯನ ವರದಿ ಪ್ರಕಟವಾಗಿತ್ತು. 2023ರ ಅಕ್ಟೋಬರ್ 25ರಂದು ಇಎಂಪಿಇ ಸಂಸ್ಥೆ 400 ಮಾದರಿಗಳ ಪರಿಶೀಲನೆ ನಡೆಸಿ, ಸೀಸ ಸೇರಿದಂತೆ ಭಾರೀ ಲೋಹಗಳು ಮಣ್ಣಿನಲ್ಲೇ ಅಸ್ತಿತ್ವವಿದೆ ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, CPCBಗೆ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ಆದರೀಗ ಮತ್ತೊಮ್ಮೆ ಮಾಡಿದ ಅಧ್ಯಯನದಿಂದ ರಾಜ್ಯದ ವಿವಿಧ ಭಾಗದ ತರಕಾರಿಗಳಲ್ಲಿ ಸೀಸದ ಪ್ರಮಾಣ ಹೆಚ್ಚಿರುವುದು ಕಂಡುಬಂದಿದೆ.
ನೆಲಮಂಗಲ, ರಾಜಾಜಿನಗರ, ಕೋಲಾರ ಮಾರುಕಟ್ಟೆಗಳಿಂದ 53 ಮಾದರಿಗಳು ಹಾಗೂ ನೆಲಮಂಗಲ, ಕೋಲಾರ, ಚಿಕ್ಕಬಳ್ಳಾಪುರ ಕೃಷಿ ಕ್ಷೇತ್ರಗಳಿಂದ ಉಳಿದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಸೀಸ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದೆ. ತರಕಾರಿ ಮಾದರಿಗಳಲ್ಲಿ 19 ಮಾದರಿಗಳು ಮಾನದಂಡಕ್ಕಿಂತ ಹೆಚ್ಚು ಸೀಸದ ಅಂಶ ಹೊಂದಿರುವುದು ಪ್ರಯೋಗಾಲಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ.
ಆರ್ಗ್ಯಾನಿಕ್ ಎಂದು ಮಾರಾಟವಾಗಿದ್ದ ಬದನೆಕಾಯಿಯಲ್ಲಿ 1.953 ಮಿ.ಗ್ರಾಂ/ಕೆಜಿ ಸೀಸ ಪತ್ತೆಯಾಗಿದ್ದು, ಇದು ನಿಗದಿತ 0.1 ಮಿ.ಗ್ರಾಂ ಮಿತಿಗಿಂತ 20 ಪಟ್ಟು ಹೆಚ್ಚಾಗಿದೆ. ತೊಂಡೆಕಾಯಿ, ಅವರೆಕಾಯಿ, ಸೊಪ್ಪು, ಕೋಸು ಸೇರಿದಂತೆ ಹಲವು ತರಕಾರಿಗಳಲ್ಲೂ ಮಿತಿಗಿಂತ ಹಲವು ಪಟ್ಟು ಅಧಿಕ ಸೀಸ ಕಂಡುಬಂದಿದೆ. ಸೌತೆಕಾಯಿ, ಹೀರೇಕಾಯಿ, ಕ್ಯಾಪ್ಸಿಕಂ, ಬೀಟ್ರೂಟ್, ಹಾಗಲಕಾಯಿ, ಶಲಗಂ, ಸ್ಕ್ವಾಶ್ ಮತ್ತು ಮೆಣಸಿನಕಾಯಿ ಮಾದರಿಗಳಲ್ಲೂ ಅತಿಯಾದ ರಾಸಾಯನಿಕ ಪತ್ತೆಯಾಗಿದೆ.
ಭಾರೀ ವಿಷಕಾರಿ ಕೀಟನಾಶಕವಾದ ಮೊನೋಕ್ರೋಟೊಫೋಸ್ ಕೂಡ ಪತ್ತೆಯಾಗಿದೆ. ದೇಶದಲ್ಲಿ 2023ರಲ್ಲಿ ಈ ಕೀಟನಾಶಕ ಬಳಕೆಯನ್ನು ನಿಷೇಧಿಸಿದ್ದರೂ ತರಕಾರಿಗಳಲ್ಲಿ ನಿಷೇಧಿತ ರಾಸಾಯನಿಕ ಪತ್ತೆಯಾಗಿದೆ. ಮೆಣಸಿನಕಾಯಿ ಮಾದರಿಗಳಲ್ಲಿ ನಿಗದಿತ 0.2 ಮಿ.ಗ್ರಾಂ/ಕೆಜಿ ಮಿತಿಗಿಂತ ಎರಡು ಪಟ್ಟು ಹೆಚ್ಚು ಮೊನೋಕ್ರೋಟೊಫೋಸ್ ಕಂಡುಬಂದಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am