ಬ್ರೇಕಿಂಗ್ ನ್ಯೂಸ್
25-02-26 04:30 pm HK News Staffer ಕರ್ನಾಟಕ
ಬೆಂಗಳೂರು, ಫೆ.25: ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಧ್ವನಿ ಎತ್ತುತಲೇ ಬಂದಿರುವ ಉದ್ಯಮಿ ಮೋಹನ್ ದಾಸ್ ಪೈ ಇದೀಗ "ನಮ್ಮ ಮೆಟ್ರೋ" ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಂಕ್ ಲೈನ್ನಲ್ಲಿ ಪಿಲ್ಲರ್ ಕಾಮಗಾರಿ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ದೂರದ ವರೆಗೆ ಬಿಎಂಆರ್ಸಿಎಲ್ ಬ್ಯಾರಿಕೇಡ್ ಅಳವಡಿಸಿತ್ತು. ಇದೀಗ ಕಾಮಗಾರಿ ಮುಗಿದು ಹಲವು ದಿನಗಳೇ ಕಳೆದಿದ್ದರು ಅವುಗಳನ್ನು ತೆರವು ಮಾಡಿಲ್ಲ. ಇದರಿಂದ ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ನಿತ್ಯ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಆಸರೆ ಸರ್ಕಾರಕ್ಕೆ ಮಾತ್ರ ಈ ಬಗ್ಗೆ ಯಾವುದೇ ಕಾಳಜಿಯಿಲ್ಲ ಎಂದು ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಳೇನ ಅಗ್ರಹಾರದಿಂದ ನಾಗವಾರವರೆಗೆ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಪಿಲ್ಲರ್ ಕಾಮಗಾರಿ ಪೂರ್ಣಗೊಂಡು ಹಲವು ತಿಂಗಳು ಕಳೆದಿದ್ದರೂ, ಕಾಮಗಾರಿ ಸ್ಥಳದ ಸುತ್ತ ಅಳವಡಿಸಿರುವ ಬ್ಯಾರಿಕೇಡ್ಗಳನ್ನು ಇನ್ನೂ ತೆಗೆದಿಲ್ಲ. ಇದರಿಂದ ಹೊಸೂರು ರಸ್ತೆ ಹಾಗೂ ಬನ್ನೇರುಘಟ್ಟ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ.
ಮೆಟ್ರೋ ಕಾಮಗಾರಿಗಾಗಿ ರಸ್ತೆಗಳಲ್ಲಿ ತೆಗೆದಿದ್ದ ಗುಂಡಿಗಳನ್ನು ಮುಚ್ಚುವ ಕಾರ್ಯವೂ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ. ಕೂಡಲೇ ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.
ಒಟ್ಟು 21.26 ಕಿಲೋಮೀಟರ್ ಉದ್ದದ ಈ ಪಿಂಕ್ ಲೈನ್ ಮಾರ್ಗದಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ವಿಭಾಗವಿದ್ದು, ಸುರಕ್ಷತಾ ಪರೀಕ್ಷೆಗಳು ನಡೆಯುತ್ತಿವೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಈ ಮಾರ್ಗವನ್ನು ತೆರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm