ಬ್ರೇಕಿಂಗ್ ನ್ಯೂಸ್
25-02-26 04:30 pm HK News Staffer ಕರ್ನಾಟಕ
ಬೆಂಗಳೂರು, ಫೆ.25: ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಧ್ವನಿ ಎತ್ತುತಲೇ ಬಂದಿರುವ ಉದ್ಯಮಿ ಮೋಹನ್ ದಾಸ್ ಪೈ ಇದೀಗ "ನಮ್ಮ ಮೆಟ್ರೋ" ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಂಕ್ ಲೈನ್ನಲ್ಲಿ ಪಿಲ್ಲರ್ ಕಾಮಗಾರಿ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ದೂರದ ವರೆಗೆ ಬಿಎಂಆರ್ಸಿಎಲ್ ಬ್ಯಾರಿಕೇಡ್ ಅಳವಡಿಸಿತ್ತು. ಇದೀಗ ಕಾಮಗಾರಿ ಮುಗಿದು ಹಲವು ದಿನಗಳೇ ಕಳೆದಿದ್ದರು ಅವುಗಳನ್ನು ತೆರವು ಮಾಡಿಲ್ಲ. ಇದರಿಂದ ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ನಿತ್ಯ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಆಸರೆ ಸರ್ಕಾರಕ್ಕೆ ಮಾತ್ರ ಈ ಬಗ್ಗೆ ಯಾವುದೇ ಕಾಳಜಿಯಿಲ್ಲ ಎಂದು ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಳೇನ ಅಗ್ರಹಾರದಿಂದ ನಾಗವಾರವರೆಗೆ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಪಿಲ್ಲರ್ ಕಾಮಗಾರಿ ಪೂರ್ಣಗೊಂಡು ಹಲವು ತಿಂಗಳು ಕಳೆದಿದ್ದರೂ, ಕಾಮಗಾರಿ ಸ್ಥಳದ ಸುತ್ತ ಅಳವಡಿಸಿರುವ ಬ್ಯಾರಿಕೇಡ್ಗಳನ್ನು ಇನ್ನೂ ತೆಗೆದಿಲ್ಲ. ಇದರಿಂದ ಹೊಸೂರು ರಸ್ತೆ ಹಾಗೂ ಬನ್ನೇರುಘಟ್ಟ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ.
ಮೆಟ್ರೋ ಕಾಮಗಾರಿಗಾಗಿ ರಸ್ತೆಗಳಲ್ಲಿ ತೆಗೆದಿದ್ದ ಗುಂಡಿಗಳನ್ನು ಮುಚ್ಚುವ ಕಾರ್ಯವೂ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ. ಕೂಡಲೇ ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.
ಒಟ್ಟು 21.26 ಕಿಲೋಮೀಟರ್ ಉದ್ದದ ಈ ಪಿಂಕ್ ಲೈನ್ ಮಾರ್ಗದಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ವಿಭಾಗವಿದ್ದು, ಸುರಕ್ಷತಾ ಪರೀಕ್ಷೆಗಳು ನಡೆಯುತ್ತಿವೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಈ ಮಾರ್ಗವನ್ನು ತೆರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm