ಬ್ರೇಕಿಂಗ್ ನ್ಯೂಸ್
25-02-26 04:30 pm HK News Staffer ಕರ್ನಾಟಕ
ಬೆಂಗಳೂರು, ಫೆ.25: ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಧ್ವನಿ ಎತ್ತುತಲೇ ಬಂದಿರುವ ಉದ್ಯಮಿ ಮೋಹನ್ ದಾಸ್ ಪೈ ಇದೀಗ "ನಮ್ಮ ಮೆಟ್ರೋ" ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಂಕ್ ಲೈನ್ನಲ್ಲಿ ಪಿಲ್ಲರ್ ಕಾಮಗಾರಿ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ದೂರದ ವರೆಗೆ ಬಿಎಂಆರ್ಸಿಎಲ್ ಬ್ಯಾರಿಕೇಡ್ ಅಳವಡಿಸಿತ್ತು. ಇದೀಗ ಕಾಮಗಾರಿ ಮುಗಿದು ಹಲವು ದಿನಗಳೇ ಕಳೆದಿದ್ದರು ಅವುಗಳನ್ನು ತೆರವು ಮಾಡಿಲ್ಲ. ಇದರಿಂದ ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ನಿತ್ಯ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಆಸರೆ ಸರ್ಕಾರಕ್ಕೆ ಮಾತ್ರ ಈ ಬಗ್ಗೆ ಯಾವುದೇ ಕಾಳಜಿಯಿಲ್ಲ ಎಂದು ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಳೇನ ಅಗ್ರಹಾರದಿಂದ ನಾಗವಾರವರೆಗೆ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಪಿಲ್ಲರ್ ಕಾಮಗಾರಿ ಪೂರ್ಣಗೊಂಡು ಹಲವು ತಿಂಗಳು ಕಳೆದಿದ್ದರೂ, ಕಾಮಗಾರಿ ಸ್ಥಳದ ಸುತ್ತ ಅಳವಡಿಸಿರುವ ಬ್ಯಾರಿಕೇಡ್ಗಳನ್ನು ಇನ್ನೂ ತೆಗೆದಿಲ್ಲ. ಇದರಿಂದ ಹೊಸೂರು ರಸ್ತೆ ಹಾಗೂ ಬನ್ನೇರುಘಟ್ಟ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ.
ಮೆಟ್ರೋ ಕಾಮಗಾರಿಗಾಗಿ ರಸ್ತೆಗಳಲ್ಲಿ ತೆಗೆದಿದ್ದ ಗುಂಡಿಗಳನ್ನು ಮುಚ್ಚುವ ಕಾರ್ಯವೂ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ. ಕೂಡಲೇ ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.
ಒಟ್ಟು 21.26 ಕಿಲೋಮೀಟರ್ ಉದ್ದದ ಈ ಪಿಂಕ್ ಲೈನ್ ಮಾರ್ಗದಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ವಿಭಾಗವಿದ್ದು, ಸುರಕ್ಷತಾ ಪರೀಕ್ಷೆಗಳು ನಡೆಯುತ್ತಿವೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಈ ಮಾರ್ಗವನ್ನು ತೆರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm