ಬ್ರೇಕಿಂಗ್ ನ್ಯೂಸ್
25-02-26 07:54 pm HK News Staffer ಕರ್ನಾಟಕ
ಚೆನ್ನೈ, ಫೆ.25: ವರನಟ ಡಾ. ರಾಜ್ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ 9 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಪ್ರಕರಣ ನಡೆದು ಬರೋಬ್ಬರಿ 25 ವರ್ಷಗಳ ಬಳಿಕ ಆರೋಪಿಗಳಿಗೆ ಅಂತಿಮವಾಗಿ ಮುಕ್ತಿ ಸಿಕ್ಕಿದೆ.
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳಾದ ಪಿ. ವೇಲ್ಮುರುಗನ್ ಹಾಗೂ ಎಂ. ಜ್ಯೋತಿರಾಮನ್ ಅವರ ಪೀಠ ಬುಧವಾರ ತೀರ್ಪು ಪ್ರಕಟಿಸಿದೆ. ಈ ಹಿಂದೆ ಸೆಪ್ಟೆಂಬರ್ 25, 2018ರಂದು ಸೆಷನ್ಸ್ ನ್ಯಾಯಾಲಯ 9 ಮಂದಿಯನ್ನು ಖುಲಾಸೆಗೊಳಿಸಿತ್ತು. ಆ ತೀರ್ಪನ್ನು ಪ್ರಶ್ನಿಸಿ ಚೆನ್ನೈ ಪೊಲೀಸರು ಹೈಕೋರ್ಟ್ ಮೊರೆ ಹೋಗಿದ್ದರು.
ಸಾಕ್ಷ್ಯ ಕೊರತೆಯೇ ಕಾರಣ:
ಸೆಷನ್ಸ್ ನ್ಯಾಯಾಲಯವು ಪೊಲೀಸ್ ಇಲಾಖೆ ಸೂಕ್ತ ಪುರಾವೆ ಸಲ್ಲಿಸದಿರುವುದನ್ನು ಉಲ್ಲೇಖಿಸಿ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ರಾಜ್ಕುಮಾರ್ ಮತ್ತು ಅವರ ಪತ್ನಿ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸದಿರುವುದು, ಮಧ್ಯಸ್ಥಿಕೆದಾರರನ್ನು ಪ್ರಶ್ನಿಸದಿರುವುದು ಸೇರಿದಂತೆ ಹಲವು ಅಂಶಗಳನ್ನು ನ್ಯಾಯಾಲಯ ಗಮನಿಸಿದೆ. ಆರೋಪಿಗಳೆಂದು ಗುರುತಿಸಲ್ಪಟ್ಟಿದ್ದ ಗೋವಿಂದರಾಜ್, ಆಂಡ್ರಿಲ್, ಪಸುವಣ್ಣ, ಪುಟ್ಟುಸಾಮಿ, ಕಲ್ಮಂಡಿರಾಮನ್, ಮಾರನ್, ಸೆಲ್ವಂ, ಅಮೃತಲಿಂಗಂ ಹಾಗೂ ನಾಗರಾಜ್ ಸೇರಿದಂತೆ 9 ಮಂದಿಗೆ ಈಗ ಅಂತಿಮ ಮುಕ್ತಿ ಲಭಿಸಿದೆ.
108 ದಿನಗಳ ವನವಾಸ:
2000ರ ಜುಲೈ 30ರಂದು ಕರ್ನಾಟಕ-ತಮಿಳುನಾಡು ಗಡಿ ಭಾಗದ ಈರೋಡ್ ಜಿಲ್ಲೆಯ ತಲವಾಡಿ ಬಳಿಯ ದೊಡ್ಡ ಗಾಜನೂರು ತೋಟದ ಮನೆಯಿಂದ ರಾಜ್ಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದ್ದ. ಈ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ರಾಜ್ಕುಮಾರ್ ಅವರೊಂದಿಗೆ ಸಂಬಂಧಿಕರಾದ ಎಸ್.ಎ. ಗೋವಿಂದರಾಜ್, ನಾಗೇಶ್ ಮತ್ತು ಸಹಾಯಕ ನಿರ್ದೇಶಕ ನಾಗಪ್ಪ ಅವರನ್ನೂ ಅಪಹರಿಸಲಾಗಿತ್ತು. ನಾಗಪ್ಪ ಸೆಪ್ಟೆಂಬರ್ 28ರಂದು ಪಾರಾಗಿ ಬಂದಿದ್ದರು. ರಾಜ್ಕುಮಾರ್ ಸೇರಿದಂತೆ ಉಳಿದವರನ್ನು ವೀರಪ್ಪನ್ 108 ದಿನಗಳ ಬಳಿಕ ಬಿಡುಗಡೆ ಮಾಡಿದ್ದ. ರಾಜ್ಕುಮಾರ್ ಬಿಡುಗಡೆಗಾಗಿ ಕೋಟ್ಯಂತರ ರೂಪಾಯಿ ನೀಡಲಾಗಿದೆ ಎಂಬ ಆರೋಪಗಳ ಹಿನ್ನೆಲೆ 2001ರಲ್ಲಿ ಪ್ರಕರಣ ದಾಖಲಾಗಿತ್ತು.
ಎನ್ಕೌಂಟರ್ನಲ್ಲಿ ಅಂತ್ಯ:
2004ರ ಅಕ್ಟೋಬರ್ 18ರಂದು ತಮಿಳುನಾಡು ವಿಶೇಷ ಕಾರ್ಯಪಡೆ ನಡೆಸಿದ ‘ಆಪರೇಷನ್ ಕಕೂನ್’ ಎನ್ಕೌಂಟರ್ನಲ್ಲಿ ವೀರಪ್ಪನ್ ಮತ್ತು ಅವನ ಸಹಚರರಾದ ಸೇತುಕುಳಿ ಗೋವಿಂದನ್ ಹಾಗೂ ಚಂದ್ರೇಗೌಡ ಹತ್ಯೆಯಾಗಿದ್ದರು. ಪ್ರಕರಣದಲ್ಲಿ ಭಾಗಿಯಾಗಿದ್ದ ಮಲ್ಲು ಎಂಬಾತ ತನಿಖೆ ವೇಳೆ ಮೃತಪಟ್ಟಿದ್ದು, ರಮೇಶ್ ತಲೆಮರೆಸಿಕೊಂಡಿದ್ದನೆಂದು ದಾಖಲೆಗಳಲ್ಲಿ ಉಲ್ಲೇಖವಿದೆ.
ಉಳಿದ 9 ಮಂದಿ ಕಳೆದ ಹಲವು ವರ್ಷಗಳಿಂದ ಗೋಪಿಚೆಟ್ಟಿಪಾಳ್ಯಂ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದರು. ಇದೀಗ ಹೈಕೋರ್ಟ್ ತೀರ್ಪಿನಿಂದ ಅವರಿಗೆ ಆರೋಪದಿಂದ ಬಿಡುಗಡೆ ಲಭಿಸಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm