ಬ್ರೇಕಿಂಗ್ ನ್ಯೂಸ್
26-02-26 10:26 am HK News Staffer ಕರ್ನಾಟಕ
ಮಂಗಳೂರು, ಫೆ.26: ನಗರದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ರೈಲ್ವೇ ಟ್ರ್ಯಾಕ್ ಬಳಿ ಕುಳಿತುಕೊಂಡಿದ್ದ ಕಾಲೇಜು ವಿದ್ಯಾರ್ಥಿ- ವಿದ್ಯಾರ್ಥಿನಿಯ ವಿಡಿಯೋ ಮಾಡಿ, ಹುಡುಗನಿಗೆ ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದ್ದು ಪಾಂಡೇಶ್ವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಾಂಡೇಶ್ವರ ಠಾಣೆ ವ್ಯಾಪ್ತಿಯ ಅತ್ತಾವರದ ನಿವಾಸಿಗಳಾದ ಸ್ಟೀವನ್ ಮೊಂತೇರೊ ಮತ್ತು ಆತನ ಮಗ ಅವಿಲ್ ಬಂಧಿತ ಆರೋಪಿಗಳು. ಫೆ.23ರಂದು ಅಪ್ರಾಪ್ತ ಕಾಲೇಜು ವಿದ್ಯಾರ್ಥಿಗಳು ರೈಲ್ವೇ ಟ್ರಾಕ್ ನಲ್ಲಿ ಕುಳಿತು ಮಾತನಾಡುತ್ತಿದ್ದಾಗ ಸ್ಟೀವನ್ ಮೊಬೈಲಿನಲ್ಲಿ ವಿಡಿಯೋ ಚಿತ್ರೀಕರಿಸಿದ್ದು ಅದನ್ನು ಫೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ.
ವಿಡಿಯೋ ಮಾಡುತ್ತ ಹುಡುಗಿಯನ್ನು ನೀನ್ಯಾರು, ಎಲ್ಲಿ ಓಡುತ್ತೀಯಾ, ಇಲ್ಲೇನು ಮಾಡ್ತಿದೀರಿ ಎಂದು ಜೋರು ಮಾಡಿದ್ದಾರೆ. ಅಲ್ಲದೆ, ಹುಡುಗನನ್ನು ಇಲ್ಲಿ ಕುಳಿತು ಏನು ಮಾಡ್ತಿದೀಯಾ, ನಾನು ವಿಡಿಯೋ ಮಾಡಿದ್ದೇನೆ, ಫೇಸ್ಬುಕ್ ಹಾಕುತ್ತೇನೆ ಎನ್ನುತ್ತ ಆತನಿಗೆ ಎರಡೇಟು ಕೊಟ್ಟು ಬೆದರಿಕೆ ಹಾಕಿದ್ದಾನೆ. ಅಲ್ಲದೆ, ತಂದೆ-ಮಗ ಇಬ್ಬರು ಸೇರಿ ಹುಡುಗನನ್ನು ಎಳಕೊಂಡು ಹೋಗಿದ್ದಾರೆ. ವಿಡಿಯೋವನ್ನು ಸ್ಟೀವನ್ ತನ್ನ ಫೇಸ್ಬುಕ್ ನಲ್ಲಿ ಷೇರ್ ಮಾಡಿ ತನ್ನದೂ ಸೆಲ್ಫಿ ತೋರಿಸಿದ್ದಾನೆ. ವಿಡಿಯೋ ವೈರಲ್ ಆಗುತ್ತಲೇ ಹುಡುಗನ ತಂದೆ ಪೊಲೀಸ್ ದೂರು ನೀಡಿದ್ದಾರೆ. ಹುಡುಗ ಪರಿಶಿಷ್ಟ ಜಾತಿಗೆ ಸೇರಿದ್ದು ಮೋರಲ್ ಪೊಲೀಸಿಂಗ್ ಮತ್ತು ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸ್ಟೀವನ್ ಈ ಹಿಂದೆ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯಾಗಿದ್ದಾನೆ.
In a case of alleged moral policing, a father and son have been arrested by Pandeshwar police for filming a college student couple who were sitting near a railway track in Attavar Babugudda area of the city, assaulting the boy, and uploading the video on social media. The arrested accused have been identified as Steven Montero and his son Avil, residents of Attavar under the Pandeshwar police station limits.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm