ಬ್ರೇಕಿಂಗ್ ನ್ಯೂಸ್
26-02-26 12:58 pm HK News Staffer ಕರ್ನಾಟಕ
ಬೆಂಗಳೂರು, ಫೆ. 26: ಬಡ ಕುಟುಂಬದ ಆಟೋ ಚಾಲಕರೊಬ್ಬರ ಮಗಳು ನ್ಯಾಯಾಧೀಶರ ಪರೀಕ್ಷೆ ಬರೆದು ತೇರ್ಗಡೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್. ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ.
ಆಟೋ ಚಾಲಕನ ಮಗಳಾಗಿ ಬೆಳೆದು, ತಾಯಿ ಜೊತೆಗೆ ಹೂವು ಮಾರುತ್ತಲೇ ಬೆಳೆದ ನಾಗಿಣಿ ಎಂಬ ಹೆಣ್ಮಗಳು ಇಂದು ನ್ಯಾಯ ತೀರ್ಮಾನದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಗೆ ಸ್ಫೂರ್ತಿ.
ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ ಸಂಸಾರ ನಡೆಸುತ್ತಿದ್ದರೆ, ತಾಯಿ ಮಂಜುಳಾ ಮಾರುಕಟ್ಟೆಯಲ್ಲಿ ಮನೆಗೆಲಸ ಮುಗಿಸಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಮನೆಯಲ್ಲಿ ಬಡತನ ಇದ್ದರೂ, ಮಗಳ ವಿದ್ಯಾಭ್ಯಾಸಕ್ಕೆ ಪೋಷಕರು ಅಡ್ಡಿ ಬರಲಿಲ್ಲ. ನಾಗಿಣಿ ಕೂಡ ಬಾಲ್ಯದಿಂದಲೇ ತಾಯಿಗೆ ಹೂವಿನ ವ್ಯಾಪಾರದಲ್ಲಿ ನೆರವಾಗುತ್ತಿದ್ದರು. ಇದರ ಜೊತೆಗೇ ಓದನ್ನೂ ಮಾಡಿಕೊಂಡಿದ್ದಳು.
10ನೇ ತರಗತಿಯ ವರೆಗೆ ಸರ್ಕಾರಿ ಕನ್ನಡ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ನಾಗಿಣಿ ತಂದೆ, ತಾಯಿಯ ಪರಿಶ್ರಮಕ್ಕೆ ತಕ್ಕ ಸಾಧನೆ ಮಾಡಿದ್ದಾಳೆ. ಚಿಕ್ಕಂದಿನಿಂದಲೂ ಓದಿನಲ್ಲಿ ಸದಾ ಮುಂದಿದ್ದ ನಾಗಿಣಿ , ಬೆಳಗ್ಗೆ ಅಮ್ಮ ಕಟ್ಟಿ ಕೊಟ್ಟ ಹೂವನ್ನು ಮಾರಾಟ ಮಾಡಿಯೇ ಶಾಲೆಗೆ ಹೋಗುತ್ತಿದ್ದಳು. ವಕೀಲೆಯಾಗಿ ವೃತ್ತಿ ಆರಂಭಿಸಿದ ಬಳಿಕವು ಹಗಲಿರುಳು ಓದಿಗೆ ಶ್ರಮ ಪಡುತ್ತಿದ್ದರು. ನ್ಯಾಯಾಧೀಶರ ಪರೀಕ್ಷೆ ಬರೆದು ತೇರ್ಗಡೆ ಆಗಿದ್ದಾರೆ. ಮಗಳು ಶ್ರಮಪಟ್ಟಿದ್ದಕ್ಕೆ ಈಗ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವುದು ಖುಷಿಯಾಗಿದೆ ಎಂದು ತಾಯಿ ಮಂಜುಳಾ ಸಂತಸ ಹಂಚಿಕೊಂಡಿದ್ದಾರೆ.
ನಮ್ಮ ಕಷ್ಟ ಅರಿತಿದ್ದ ಮಗಳು ಸಹ ಹಗಲಿರುಳು ಕಷ್ಟಪಟ್ಟು ಓದುತ್ತಿದ್ದಳು. ಇಂದು ಇಡೀ ಊರಿನ ಜನ ಹೆಮ್ಮೆಪಡುವಂತೆ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾಳೆ. ಮಗಳ ಸಾಧನೆ ನನಗೆ ಖುಷಿ ತಂದಿದೆ. ನ್ಯಾಯಾಧೀಶೆಯಾಗಿ ನೊಂದವರಿಗೆ ದನಿಯಾಗಲಿ ಎಂದು ತಂದೆ ಲಕ್ಷ್ಮಣ್ ಶುಭ ಹಾರೈಸಿದ್ದಾರೆ.
26-02-26 12:58 pm
HK News Staffer
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 03:48 pm
Mangaluru Staffer
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm