ಬ್ರೇಕಿಂಗ್ ನ್ಯೂಸ್
26-02-26 12:58 pm HK News Staffer ಕರ್ನಾಟಕ
ಬೆಂಗಳೂರು, ಫೆ. 26: ಬಡ ಕುಟುಂಬದ ಆಟೋ ಚಾಲಕರೊಬ್ಬರ ಮಗಳು ನ್ಯಾಯಾಧೀಶರ ಪರೀಕ್ಷೆ ಬರೆದು ತೇರ್ಗಡೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್. ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ.
ಆಟೋ ಚಾಲಕನ ಮಗಳಾಗಿ ಬೆಳೆದು, ತಾಯಿ ಜೊತೆಗೆ ಹೂವು ಮಾರುತ್ತಲೇ ಬೆಳೆದ ನಾಗಿಣಿ ಎಂಬ ಹೆಣ್ಮಗಳು ಇಂದು ನ್ಯಾಯ ತೀರ್ಮಾನದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಗೆ ಸ್ಫೂರ್ತಿ.
ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ ಸಂಸಾರ ನಡೆಸುತ್ತಿದ್ದರೆ, ತಾಯಿ ಮಂಜುಳಾ ಮಾರುಕಟ್ಟೆಯಲ್ಲಿ ಮನೆಗೆಲಸ ಮುಗಿಸಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಮನೆಯಲ್ಲಿ ಬಡತನ ಇದ್ದರೂ, ಮಗಳ ವಿದ್ಯಾಭ್ಯಾಸಕ್ಕೆ ಪೋಷಕರು ಅಡ್ಡಿ ಬರಲಿಲ್ಲ. ನಾಗಿಣಿ ಕೂಡ ಬಾಲ್ಯದಿಂದಲೇ ತಾಯಿಗೆ ಹೂವಿನ ವ್ಯಾಪಾರದಲ್ಲಿ ನೆರವಾಗುತ್ತಿದ್ದರು. ಇದರ ಜೊತೆಗೇ ಓದನ್ನೂ ಮಾಡಿಕೊಂಡಿದ್ದಳು.
10ನೇ ತರಗತಿಯ ವರೆಗೆ ಸರ್ಕಾರಿ ಕನ್ನಡ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ನಾಗಿಣಿ ತಂದೆ, ತಾಯಿಯ ಪರಿಶ್ರಮಕ್ಕೆ ತಕ್ಕ ಸಾಧನೆ ಮಾಡಿದ್ದಾಳೆ. ಚಿಕ್ಕಂದಿನಿಂದಲೂ ಓದಿನಲ್ಲಿ ಸದಾ ಮುಂದಿದ್ದ ನಾಗಿಣಿ , ಬೆಳಗ್ಗೆ ಅಮ್ಮ ಕಟ್ಟಿ ಕೊಟ್ಟ ಹೂವನ್ನು ಮಾರಾಟ ಮಾಡಿಯೇ ಶಾಲೆಗೆ ಹೋಗುತ್ತಿದ್ದಳು. ವಕೀಲೆಯಾಗಿ ವೃತ್ತಿ ಆರಂಭಿಸಿದ ಬಳಿಕವು ಹಗಲಿರುಳು ಓದಿಗೆ ಶ್ರಮ ಪಡುತ್ತಿದ್ದರು. ನ್ಯಾಯಾಧೀಶರ ಪರೀಕ್ಷೆ ಬರೆದು ತೇರ್ಗಡೆ ಆಗಿದ್ದಾರೆ. ಮಗಳು ಶ್ರಮಪಟ್ಟಿದ್ದಕ್ಕೆ ಈಗ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವುದು ಖುಷಿಯಾಗಿದೆ ಎಂದು ತಾಯಿ ಮಂಜುಳಾ ಸಂತಸ ಹಂಚಿಕೊಂಡಿದ್ದಾರೆ.
ನಮ್ಮ ಕಷ್ಟ ಅರಿತಿದ್ದ ಮಗಳು ಸಹ ಹಗಲಿರುಳು ಕಷ್ಟಪಟ್ಟು ಓದುತ್ತಿದ್ದಳು. ಇಂದು ಇಡೀ ಊರಿನ ಜನ ಹೆಮ್ಮೆಪಡುವಂತೆ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾಳೆ. ಮಗಳ ಸಾಧನೆ ನನಗೆ ಖುಷಿ ತಂದಿದೆ. ನ್ಯಾಯಾಧೀಶೆಯಾಗಿ ನೊಂದವರಿಗೆ ದನಿಯಾಗಲಿ ಎಂದು ತಂದೆ ಲಕ್ಷ್ಮಣ್ ಶುಭ ಹಾರೈಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm