ಬ್ರೇಕಿಂಗ್ ನ್ಯೂಸ್
26-02-26 12:58 pm HK News Staffer ಕರ್ನಾಟಕ
ಬೆಂಗಳೂರು, ಫೆ. 26: ಬಡ ಕುಟುಂಬದ ಆಟೋ ಚಾಲಕರೊಬ್ಬರ ಮಗಳು ನ್ಯಾಯಾಧೀಶರ ಪರೀಕ್ಷೆ ಬರೆದು ತೇರ್ಗಡೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್. ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ.
ಆಟೋ ಚಾಲಕನ ಮಗಳಾಗಿ ಬೆಳೆದು, ತಾಯಿ ಜೊತೆಗೆ ಹೂವು ಮಾರುತ್ತಲೇ ಬೆಳೆದ ನಾಗಿಣಿ ಎಂಬ ಹೆಣ್ಮಗಳು ಇಂದು ನ್ಯಾಯ ತೀರ್ಮಾನದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಗೆ ಸ್ಫೂರ್ತಿ.
ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ ಸಂಸಾರ ನಡೆಸುತ್ತಿದ್ದರೆ, ತಾಯಿ ಮಂಜುಳಾ ಮಾರುಕಟ್ಟೆಯಲ್ಲಿ ಮನೆಗೆಲಸ ಮುಗಿಸಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಮನೆಯಲ್ಲಿ ಬಡತನ ಇದ್ದರೂ, ಮಗಳ ವಿದ್ಯಾಭ್ಯಾಸಕ್ಕೆ ಪೋಷಕರು ಅಡ್ಡಿ ಬರಲಿಲ್ಲ. ನಾಗಿಣಿ ಕೂಡ ಬಾಲ್ಯದಿಂದಲೇ ತಾಯಿಗೆ ಹೂವಿನ ವ್ಯಾಪಾರದಲ್ಲಿ ನೆರವಾಗುತ್ತಿದ್ದರು. ಇದರ ಜೊತೆಗೇ ಓದನ್ನೂ ಮಾಡಿಕೊಂಡಿದ್ದಳು.
10ನೇ ತರಗತಿಯ ವರೆಗೆ ಸರ್ಕಾರಿ ಕನ್ನಡ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ನಾಗಿಣಿ ತಂದೆ, ತಾಯಿಯ ಪರಿಶ್ರಮಕ್ಕೆ ತಕ್ಕ ಸಾಧನೆ ಮಾಡಿದ್ದಾಳೆ. ಚಿಕ್ಕಂದಿನಿಂದಲೂ ಓದಿನಲ್ಲಿ ಸದಾ ಮುಂದಿದ್ದ ನಾಗಿಣಿ , ಬೆಳಗ್ಗೆ ಅಮ್ಮ ಕಟ್ಟಿ ಕೊಟ್ಟ ಹೂವನ್ನು ಮಾರಾಟ ಮಾಡಿಯೇ ಶಾಲೆಗೆ ಹೋಗುತ್ತಿದ್ದಳು. ವಕೀಲೆಯಾಗಿ ವೃತ್ತಿ ಆರಂಭಿಸಿದ ಬಳಿಕವು ಹಗಲಿರುಳು ಓದಿಗೆ ಶ್ರಮ ಪಡುತ್ತಿದ್ದರು. ನ್ಯಾಯಾಧೀಶರ ಪರೀಕ್ಷೆ ಬರೆದು ತೇರ್ಗಡೆ ಆಗಿದ್ದಾರೆ. ಮಗಳು ಶ್ರಮಪಟ್ಟಿದ್ದಕ್ಕೆ ಈಗ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವುದು ಖುಷಿಯಾಗಿದೆ ಎಂದು ತಾಯಿ ಮಂಜುಳಾ ಸಂತಸ ಹಂಚಿಕೊಂಡಿದ್ದಾರೆ.
ನಮ್ಮ ಕಷ್ಟ ಅರಿತಿದ್ದ ಮಗಳು ಸಹ ಹಗಲಿರುಳು ಕಷ್ಟಪಟ್ಟು ಓದುತ್ತಿದ್ದಳು. ಇಂದು ಇಡೀ ಊರಿನ ಜನ ಹೆಮ್ಮೆಪಡುವಂತೆ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾಳೆ. ಮಗಳ ಸಾಧನೆ ನನಗೆ ಖುಷಿ ತಂದಿದೆ. ನ್ಯಾಯಾಧೀಶೆಯಾಗಿ ನೊಂದವರಿಗೆ ದನಿಯಾಗಲಿ ಎಂದು ತಂದೆ ಲಕ್ಷ್ಮಣ್ ಶುಭ ಹಾರೈಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm