ಬ್ರೇಕಿಂಗ್ ನ್ಯೂಸ್
27-02-26 10:17 pm HK News Desk ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೆ ಶಾಕ್ ನೀಡಲು ಮುಂದಾಗಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ, ಜಮೀನು ಮತ್ತು ಕಟ್ಟಡಗಳ ಮಾರ್ಗದರ್ಶಿ ಮೌಲ್ಯದಲ್ಲಿ ಭಾರೀ ಪರಿಷ್ಕರಣೆ ತರಲು ಕಂದಾಯ ಇಲಾಖೆ ಮುಂದಾಗಿದೆ. ಮೂಲಗಳ ಪ್ರಕಾರ, ಗೈಡೆನ್ಸ್ ವ್ಯಾಲ್ಯೂನಲ್ಲಿ ಶೇ. 15 - 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಮಾರ್ಗದರ್ಶಿ ಮೌಲ್ಯವನ್ನು ಹೆಚ್ಚಿಸಿದರೆ ನೇರವಾಗಿ ಮುದ್ರಾಂಕ ಶುಲ್ಕ (Stamp Duty) ಮತ್ತು ನೋಂದಣಿ ಶುಲ್ಕಗಳ (Registration Fees) ಮೇಲೆ ಪರಿಣಾಮ ಬೀರಲಿದೆ. ಕಂದಾಯ ಇಲಾಖೆಯಿಂದ ಕೊಟ್ಟ ಟಾರ್ಗೆಟ್ ರೀಚ್ ಆಗದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಬಹುದು ಎಂದು ಹೇಳಲಾಗುತ್ತಿದೆ. ಆಸ್ತಿ ನೋಂದಣಿಯಿಂದ ಬರುತ್ತಿರುವ ಆದಾಯದಲ್ಲಿ ಕೊರತೆಯನ್ನು ನೀಗಿಸಲು ಸರ್ಕಾರ ಈ ದಾರಿಯನ್ನು ಹಿಡಿಯಬಹುದು.
ಗೈಡೆನ್ಸ್ ವ್ಯಾಲ್ಯೂ ಏಪ್ರಿಲ್ ಒಂದರಿಂದ ಅಧಿಕ?
ಪರಿಷ್ಕೃತ ಮಾರ್ಗದರ್ಶಿ ಮೌಲ್ಯವನ್ನು ಜಾರಿಗೆ ತರಲು ಮತ್ತು ಇದಕ್ಕೆ ಸಂಬಂಧಿಸಿದ ಕರಡನ್ನು ಆದಷ್ಟು ಬೇಗ ಪ್ರಕಟಿಸಲು, ಕರ್ನಾಟಕ ಸರ್ಕಾರ, ನೋಂದಣಿ ಇಲಾಖೆಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಹೊಸ ದರ ಜಾರಿಗೆ ಬರಬಹುದು. ಕಂದಾಯ ಇಲಾಖೆಯ ಕಾನೂನಿನ ಪ್ರಕಾರ, ಗೈಡೆನ್ಸ್ ವ್ಯಾಲ್ಯೂವನ್ನು ಪ್ರತೀ ವರ್ಷ ಬದಲಾಯಿಸಬಹುದು.
ಕಳೆದ ಬಾರಿ ಅಂದರೆ ಅಕ್ಟೋಬರ್ 2023ರಲ್ಲಿ ಸ್ಟ್ಯಾಂಪ್ ಡ್ಯೂಟಿ ಮೊತ್ತವನ್ನು ಹೆಚ್ಚಿಸಲಾಗಿತ್ತು. ಇದೀಗ ಮೌಲ್ಯಮಾಪನ ಸಮಿತಿ, ಮತ್ತೊಮ್ಮೆ ಶುಲ್ಕ ಪರಿಷ್ಕರಣೆಗೆ ಶಿಫಾರಸನ್ನು ಮಾಡಿದೆ ಎಂದು ಹೇಳಲಾಗುತ್ತಿದೆ. ಸದ್ಯ, ಸರ್ಕಾರ ಗೈಡೆನ್ಸ್ ವ್ಯಾಲ್ಯೂ ಮೇಲೆ ಶೇ. 5ರಷ್ಟು ಸ್ಟ್ಯಾಂಪ್ ಡ್ಯೂಟಿ, ಶೇ. 2ರಷ್ಟು ನೋಂದಣಿ ಶುಲ್ಕ ಮತ್ತು ಶೇ. 0.60ರಷ್ಟು ಸೆಸ್ ಮತ್ತು ಸರ್ಚಾರ್ಜ್ ಅನ್ನು ವಿಧಿಸುತ್ತದೆ. ಅಂದರೆ, ಒಟ್ಟಾರೆಯಾಗಿ ಆಸ್ತಿ ಖರೀದಿದಾರರು ಶೇ. 7.60 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈಗ, ಅದನ್ನು ಶೇ.15 - 20ಕ್ಕೆ ಸರ್ಕಾರ ಹೆಚ್ಚಿಸುವ ಸಾಧ್ಯತೆಯಿದೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm