ಬ್ರೇಕಿಂಗ್ ನ್ಯೂಸ್
27-02-26 10:17 pm HK News Desk ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೆ ಶಾಕ್ ನೀಡಲು ಮುಂದಾಗಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ, ಜಮೀನು ಮತ್ತು ಕಟ್ಟಡಗಳ ಮಾರ್ಗದರ್ಶಿ ಮೌಲ್ಯದಲ್ಲಿ ಭಾರೀ ಪರಿಷ್ಕರಣೆ ತರಲು ಕಂದಾಯ ಇಲಾಖೆ ಮುಂದಾಗಿದೆ. ಮೂಲಗಳ ಪ್ರಕಾರ, ಗೈಡೆನ್ಸ್ ವ್ಯಾಲ್ಯೂನಲ್ಲಿ ಶೇ. 15 - 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಮಾರ್ಗದರ್ಶಿ ಮೌಲ್ಯವನ್ನು ಹೆಚ್ಚಿಸಿದರೆ ನೇರವಾಗಿ ಮುದ್ರಾಂಕ ಶುಲ್ಕ (Stamp Duty) ಮತ್ತು ನೋಂದಣಿ ಶುಲ್ಕಗಳ (Registration Fees) ಮೇಲೆ ಪರಿಣಾಮ ಬೀರಲಿದೆ. ಕಂದಾಯ ಇಲಾಖೆಯಿಂದ ಕೊಟ್ಟ ಟಾರ್ಗೆಟ್ ರೀಚ್ ಆಗದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಬಹುದು ಎಂದು ಹೇಳಲಾಗುತ್ತಿದೆ. ಆಸ್ತಿ ನೋಂದಣಿಯಿಂದ ಬರುತ್ತಿರುವ ಆದಾಯದಲ್ಲಿ ಕೊರತೆಯನ್ನು ನೀಗಿಸಲು ಸರ್ಕಾರ ಈ ದಾರಿಯನ್ನು ಹಿಡಿಯಬಹುದು.
ಗೈಡೆನ್ಸ್ ವ್ಯಾಲ್ಯೂ ಏಪ್ರಿಲ್ ಒಂದರಿಂದ ಅಧಿಕ?
ಪರಿಷ್ಕೃತ ಮಾರ್ಗದರ್ಶಿ ಮೌಲ್ಯವನ್ನು ಜಾರಿಗೆ ತರಲು ಮತ್ತು ಇದಕ್ಕೆ ಸಂಬಂಧಿಸಿದ ಕರಡನ್ನು ಆದಷ್ಟು ಬೇಗ ಪ್ರಕಟಿಸಲು, ಕರ್ನಾಟಕ ಸರ್ಕಾರ, ನೋಂದಣಿ ಇಲಾಖೆಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಹೊಸ ದರ ಜಾರಿಗೆ ಬರಬಹುದು. ಕಂದಾಯ ಇಲಾಖೆಯ ಕಾನೂನಿನ ಪ್ರಕಾರ, ಗೈಡೆನ್ಸ್ ವ್ಯಾಲ್ಯೂವನ್ನು ಪ್ರತೀ ವರ್ಷ ಬದಲಾಯಿಸಬಹುದು.
ಕಳೆದ ಬಾರಿ ಅಂದರೆ ಅಕ್ಟೋಬರ್ 2023ರಲ್ಲಿ ಸ್ಟ್ಯಾಂಪ್ ಡ್ಯೂಟಿ ಮೊತ್ತವನ್ನು ಹೆಚ್ಚಿಸಲಾಗಿತ್ತು. ಇದೀಗ ಮೌಲ್ಯಮಾಪನ ಸಮಿತಿ, ಮತ್ತೊಮ್ಮೆ ಶುಲ್ಕ ಪರಿಷ್ಕರಣೆಗೆ ಶಿಫಾರಸನ್ನು ಮಾಡಿದೆ ಎಂದು ಹೇಳಲಾಗುತ್ತಿದೆ. ಸದ್ಯ, ಸರ್ಕಾರ ಗೈಡೆನ್ಸ್ ವ್ಯಾಲ್ಯೂ ಮೇಲೆ ಶೇ. 5ರಷ್ಟು ಸ್ಟ್ಯಾಂಪ್ ಡ್ಯೂಟಿ, ಶೇ. 2ರಷ್ಟು ನೋಂದಣಿ ಶುಲ್ಕ ಮತ್ತು ಶೇ. 0.60ರಷ್ಟು ಸೆಸ್ ಮತ್ತು ಸರ್ಚಾರ್ಜ್ ಅನ್ನು ವಿಧಿಸುತ್ತದೆ. ಅಂದರೆ, ಒಟ್ಟಾರೆಯಾಗಿ ಆಸ್ತಿ ಖರೀದಿದಾರರು ಶೇ. 7.60 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈಗ, ಅದನ್ನು ಶೇ.15 - 20ಕ್ಕೆ ಸರ್ಕಾರ ಹೆಚ್ಚಿಸುವ ಸಾಧ್ಯತೆಯಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm