ಬ್ರೇಕಿಂಗ್ ನ್ಯೂಸ್
27-02-26 10:17 pm HK News Desk ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೆ ಶಾಕ್ ನೀಡಲು ಮುಂದಾಗಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ, ಜಮೀನು ಮತ್ತು ಕಟ್ಟಡಗಳ ಮಾರ್ಗದರ್ಶಿ ಮೌಲ್ಯದಲ್ಲಿ ಭಾರೀ ಪರಿಷ್ಕರಣೆ ತರಲು ಕಂದಾಯ ಇಲಾಖೆ ಮುಂದಾಗಿದೆ. ಮೂಲಗಳ ಪ್ರಕಾರ, ಗೈಡೆನ್ಸ್ ವ್ಯಾಲ್ಯೂನಲ್ಲಿ ಶೇ. 15 - 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಮಾರ್ಗದರ್ಶಿ ಮೌಲ್ಯವನ್ನು ಹೆಚ್ಚಿಸಿದರೆ ನೇರವಾಗಿ ಮುದ್ರಾಂಕ ಶುಲ್ಕ (Stamp Duty) ಮತ್ತು ನೋಂದಣಿ ಶುಲ್ಕಗಳ (Registration Fees) ಮೇಲೆ ಪರಿಣಾಮ ಬೀರಲಿದೆ. ಕಂದಾಯ ಇಲಾಖೆಯಿಂದ ಕೊಟ್ಟ ಟಾರ್ಗೆಟ್ ರೀಚ್ ಆಗದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಬಹುದು ಎಂದು ಹೇಳಲಾಗುತ್ತಿದೆ. ಆಸ್ತಿ ನೋಂದಣಿಯಿಂದ ಬರುತ್ತಿರುವ ಆದಾಯದಲ್ಲಿ ಕೊರತೆಯನ್ನು ನೀಗಿಸಲು ಸರ್ಕಾರ ಈ ದಾರಿಯನ್ನು ಹಿಡಿಯಬಹುದು.
ಗೈಡೆನ್ಸ್ ವ್ಯಾಲ್ಯೂ ಏಪ್ರಿಲ್ ಒಂದರಿಂದ ಅಧಿಕ?
ಪರಿಷ್ಕೃತ ಮಾರ್ಗದರ್ಶಿ ಮೌಲ್ಯವನ್ನು ಜಾರಿಗೆ ತರಲು ಮತ್ತು ಇದಕ್ಕೆ ಸಂಬಂಧಿಸಿದ ಕರಡನ್ನು ಆದಷ್ಟು ಬೇಗ ಪ್ರಕಟಿಸಲು, ಕರ್ನಾಟಕ ಸರ್ಕಾರ, ನೋಂದಣಿ ಇಲಾಖೆಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಹೊಸ ದರ ಜಾರಿಗೆ ಬರಬಹುದು. ಕಂದಾಯ ಇಲಾಖೆಯ ಕಾನೂನಿನ ಪ್ರಕಾರ, ಗೈಡೆನ್ಸ್ ವ್ಯಾಲ್ಯೂವನ್ನು ಪ್ರತೀ ವರ್ಷ ಬದಲಾಯಿಸಬಹುದು.
ಕಳೆದ ಬಾರಿ ಅಂದರೆ ಅಕ್ಟೋಬರ್ 2023ರಲ್ಲಿ ಸ್ಟ್ಯಾಂಪ್ ಡ್ಯೂಟಿ ಮೊತ್ತವನ್ನು ಹೆಚ್ಚಿಸಲಾಗಿತ್ತು. ಇದೀಗ ಮೌಲ್ಯಮಾಪನ ಸಮಿತಿ, ಮತ್ತೊಮ್ಮೆ ಶುಲ್ಕ ಪರಿಷ್ಕರಣೆಗೆ ಶಿಫಾರಸನ್ನು ಮಾಡಿದೆ ಎಂದು ಹೇಳಲಾಗುತ್ತಿದೆ. ಸದ್ಯ, ಸರ್ಕಾರ ಗೈಡೆನ್ಸ್ ವ್ಯಾಲ್ಯೂ ಮೇಲೆ ಶೇ. 5ರಷ್ಟು ಸ್ಟ್ಯಾಂಪ್ ಡ್ಯೂಟಿ, ಶೇ. 2ರಷ್ಟು ನೋಂದಣಿ ಶುಲ್ಕ ಮತ್ತು ಶೇ. 0.60ರಷ್ಟು ಸೆಸ್ ಮತ್ತು ಸರ್ಚಾರ್ಜ್ ಅನ್ನು ವಿಧಿಸುತ್ತದೆ. ಅಂದರೆ, ಒಟ್ಟಾರೆಯಾಗಿ ಆಸ್ತಿ ಖರೀದಿದಾರರು ಶೇ. 7.60 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈಗ, ಅದನ್ನು ಶೇ.15 - 20ಕ್ಕೆ ಸರ್ಕಾರ ಹೆಚ್ಚಿಸುವ ಸಾಧ್ಯತೆಯಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm