ಬ್ರೇಕಿಂಗ್ ನ್ಯೂಸ್
27-02-26 10:17 pm HK News Desk ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೆ ಶಾಕ್ ನೀಡಲು ಮುಂದಾಗಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ, ಜಮೀನು ಮತ್ತು ಕಟ್ಟಡಗಳ ಮಾರ್ಗದರ್ಶಿ ಮೌಲ್ಯದಲ್ಲಿ ಭಾರೀ ಪರಿಷ್ಕರಣೆ ತರಲು ಕಂದಾಯ ಇಲಾಖೆ ಮುಂದಾಗಿದೆ. ಮೂಲಗಳ ಪ್ರಕಾರ, ಗೈಡೆನ್ಸ್ ವ್ಯಾಲ್ಯೂನಲ್ಲಿ ಶೇ. 15 - 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಮಾರ್ಗದರ್ಶಿ ಮೌಲ್ಯವನ್ನು ಹೆಚ್ಚಿಸಿದರೆ ನೇರವಾಗಿ ಮುದ್ರಾಂಕ ಶುಲ್ಕ (Stamp Duty) ಮತ್ತು ನೋಂದಣಿ ಶುಲ್ಕಗಳ (Registration Fees) ಮೇಲೆ ಪರಿಣಾಮ ಬೀರಲಿದೆ. ಕಂದಾಯ ಇಲಾಖೆಯಿಂದ ಕೊಟ್ಟ ಟಾರ್ಗೆಟ್ ರೀಚ್ ಆಗದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಬಹುದು ಎಂದು ಹೇಳಲಾಗುತ್ತಿದೆ. ಆಸ್ತಿ ನೋಂದಣಿಯಿಂದ ಬರುತ್ತಿರುವ ಆದಾಯದಲ್ಲಿ ಕೊರತೆಯನ್ನು ನೀಗಿಸಲು ಸರ್ಕಾರ ಈ ದಾರಿಯನ್ನು ಹಿಡಿಯಬಹುದು.
ಗೈಡೆನ್ಸ್ ವ್ಯಾಲ್ಯೂ ಏಪ್ರಿಲ್ ಒಂದರಿಂದ ಅಧಿಕ?
ಪರಿಷ್ಕೃತ ಮಾರ್ಗದರ್ಶಿ ಮೌಲ್ಯವನ್ನು ಜಾರಿಗೆ ತರಲು ಮತ್ತು ಇದಕ್ಕೆ ಸಂಬಂಧಿಸಿದ ಕರಡನ್ನು ಆದಷ್ಟು ಬೇಗ ಪ್ರಕಟಿಸಲು, ಕರ್ನಾಟಕ ಸರ್ಕಾರ, ನೋಂದಣಿ ಇಲಾಖೆಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಹೊಸ ದರ ಜಾರಿಗೆ ಬರಬಹುದು. ಕಂದಾಯ ಇಲಾಖೆಯ ಕಾನೂನಿನ ಪ್ರಕಾರ, ಗೈಡೆನ್ಸ್ ವ್ಯಾಲ್ಯೂವನ್ನು ಪ್ರತೀ ವರ್ಷ ಬದಲಾಯಿಸಬಹುದು.
ಕಳೆದ ಬಾರಿ ಅಂದರೆ ಅಕ್ಟೋಬರ್ 2023ರಲ್ಲಿ ಸ್ಟ್ಯಾಂಪ್ ಡ್ಯೂಟಿ ಮೊತ್ತವನ್ನು ಹೆಚ್ಚಿಸಲಾಗಿತ್ತು. ಇದೀಗ ಮೌಲ್ಯಮಾಪನ ಸಮಿತಿ, ಮತ್ತೊಮ್ಮೆ ಶುಲ್ಕ ಪರಿಷ್ಕರಣೆಗೆ ಶಿಫಾರಸನ್ನು ಮಾಡಿದೆ ಎಂದು ಹೇಳಲಾಗುತ್ತಿದೆ. ಸದ್ಯ, ಸರ್ಕಾರ ಗೈಡೆನ್ಸ್ ವ್ಯಾಲ್ಯೂ ಮೇಲೆ ಶೇ. 5ರಷ್ಟು ಸ್ಟ್ಯಾಂಪ್ ಡ್ಯೂಟಿ, ಶೇ. 2ರಷ್ಟು ನೋಂದಣಿ ಶುಲ್ಕ ಮತ್ತು ಶೇ. 0.60ರಷ್ಟು ಸೆಸ್ ಮತ್ತು ಸರ್ಚಾರ್ಜ್ ಅನ್ನು ವಿಧಿಸುತ್ತದೆ. ಅಂದರೆ, ಒಟ್ಟಾರೆಯಾಗಿ ಆಸ್ತಿ ಖರೀದಿದಾರರು ಶೇ. 7.60 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈಗ, ಅದನ್ನು ಶೇ.15 - 20ಕ್ಕೆ ಸರ್ಕಾರ ಹೆಚ್ಚಿಸುವ ಸಾಧ್ಯತೆಯಿದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm