ಬ್ರೇಕಿಂಗ್ ನ್ಯೂಸ್
27-02-26 10:17 pm HK News Desk ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೆ ಶಾಕ್ ನೀಡಲು ಮುಂದಾಗಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ, ಜಮೀನು ಮತ್ತು ಕಟ್ಟಡಗಳ ಮಾರ್ಗದರ್ಶಿ ಮೌಲ್ಯದಲ್ಲಿ ಭಾರೀ ಪರಿಷ್ಕರಣೆ ತರಲು ಕಂದಾಯ ಇಲಾಖೆ ಮುಂದಾಗಿದೆ. ಮೂಲಗಳ ಪ್ರಕಾರ, ಗೈಡೆನ್ಸ್ ವ್ಯಾಲ್ಯೂನಲ್ಲಿ ಶೇ. 15 - 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಮಾರ್ಗದರ್ಶಿ ಮೌಲ್ಯವನ್ನು ಹೆಚ್ಚಿಸಿದರೆ ನೇರವಾಗಿ ಮುದ್ರಾಂಕ ಶುಲ್ಕ (Stamp Duty) ಮತ್ತು ನೋಂದಣಿ ಶುಲ್ಕಗಳ (Registration Fees) ಮೇಲೆ ಪರಿಣಾಮ ಬೀರಲಿದೆ. ಕಂದಾಯ ಇಲಾಖೆಯಿಂದ ಕೊಟ್ಟ ಟಾರ್ಗೆಟ್ ರೀಚ್ ಆಗದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಬಹುದು ಎಂದು ಹೇಳಲಾಗುತ್ತಿದೆ. ಆಸ್ತಿ ನೋಂದಣಿಯಿಂದ ಬರುತ್ತಿರುವ ಆದಾಯದಲ್ಲಿ ಕೊರತೆಯನ್ನು ನೀಗಿಸಲು ಸರ್ಕಾರ ಈ ದಾರಿಯನ್ನು ಹಿಡಿಯಬಹುದು.
ಗೈಡೆನ್ಸ್ ವ್ಯಾಲ್ಯೂ ಏಪ್ರಿಲ್ ಒಂದರಿಂದ ಅಧಿಕ?
ಪರಿಷ್ಕೃತ ಮಾರ್ಗದರ್ಶಿ ಮೌಲ್ಯವನ್ನು ಜಾರಿಗೆ ತರಲು ಮತ್ತು ಇದಕ್ಕೆ ಸಂಬಂಧಿಸಿದ ಕರಡನ್ನು ಆದಷ್ಟು ಬೇಗ ಪ್ರಕಟಿಸಲು, ಕರ್ನಾಟಕ ಸರ್ಕಾರ, ನೋಂದಣಿ ಇಲಾಖೆಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಹೊಸ ದರ ಜಾರಿಗೆ ಬರಬಹುದು. ಕಂದಾಯ ಇಲಾಖೆಯ ಕಾನೂನಿನ ಪ್ರಕಾರ, ಗೈಡೆನ್ಸ್ ವ್ಯಾಲ್ಯೂವನ್ನು ಪ್ರತೀ ವರ್ಷ ಬದಲಾಯಿಸಬಹುದು.
ಕಳೆದ ಬಾರಿ ಅಂದರೆ ಅಕ್ಟೋಬರ್ 2023ರಲ್ಲಿ ಸ್ಟ್ಯಾಂಪ್ ಡ್ಯೂಟಿ ಮೊತ್ತವನ್ನು ಹೆಚ್ಚಿಸಲಾಗಿತ್ತು. ಇದೀಗ ಮೌಲ್ಯಮಾಪನ ಸಮಿತಿ, ಮತ್ತೊಮ್ಮೆ ಶುಲ್ಕ ಪರಿಷ್ಕರಣೆಗೆ ಶಿಫಾರಸನ್ನು ಮಾಡಿದೆ ಎಂದು ಹೇಳಲಾಗುತ್ತಿದೆ. ಸದ್ಯ, ಸರ್ಕಾರ ಗೈಡೆನ್ಸ್ ವ್ಯಾಲ್ಯೂ ಮೇಲೆ ಶೇ. 5ರಷ್ಟು ಸ್ಟ್ಯಾಂಪ್ ಡ್ಯೂಟಿ, ಶೇ. 2ರಷ್ಟು ನೋಂದಣಿ ಶುಲ್ಕ ಮತ್ತು ಶೇ. 0.60ರಷ್ಟು ಸೆಸ್ ಮತ್ತು ಸರ್ಚಾರ್ಜ್ ಅನ್ನು ವಿಧಿಸುತ್ತದೆ. ಅಂದರೆ, ಒಟ್ಟಾರೆಯಾಗಿ ಆಸ್ತಿ ಖರೀದಿದಾರರು ಶೇ. 7.60 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈಗ, ಅದನ್ನು ಶೇ.15 - 20ಕ್ಕೆ ಸರ್ಕಾರ ಹೆಚ್ಚಿಸುವ ಸಾಧ್ಯತೆಯಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm