ಬ್ರೇಕಿಂಗ್ ನ್ಯೂಸ್
01-03-26 04:59 pm HK News Desk ಕರ್ನಾಟಕ
ಮಡಿಕೇರಿ, ಮಾರ್ಚ್ 1: ಕಾಡಾನೆ ದಾಳಿಗೆ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಬಲಿಯಾದ ಘಟನೆ ಕೊಡಗು ಜಿಲ್ಲೆಯ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ(17) ಮೃತ ದುರ್ದೈವಿ.
ಶನಿವಾರ ಸಂಜೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.
ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ ನಿನ್ನೆ ಸಂಜೆ ಕಾಲೇಜು ಮುಗಿಸಿ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಇಳಿದು ನಡೆದು ಹೋಗುತ್ತಿದ್ದಾಗ ಏಕಾಏಕಿ ಆನೆ ದಾಳಿ ನಡೆಸಿದೆ. ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.
ಆನೆ ದಾಳಿಯಿಂದ ವಿದ್ಯಾರ್ಥಿನಿ ಬಲಿಯಾಗಿದ್ದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲಾಖೆಯಿಂದ ಪರಿಹಾರ ಕೊಡುವಂತೆ ಮತ್ತು ಕಾಡಾನೆ ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ. ಬೆಟ್ಟತ್ತೂರಿನ ಸುತ್ತಮುತ್ತ ಆನೆಗಳು ಓಡಾಡುತಿದ್ದು ಆನೆ ದಾಳಿ ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಆನೆ ಮತ್ತು ಮಾನವ ಸಂಘರ್ಷ ಹೆಚ್ಚುತ್ತಿದ್ದು ಸರ್ಕಾರ ಕೂಡಲೇ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಅರಣ್ಯ ಅಧಿಕಾರಿಗಳು ಒಂದು ಬಾರಿ ಗ್ರಾಮಕ್ಕೆ ಬಂದಿದ್ದರೂ, ಆನೆಗಳನ್ನು ಓಡಿಸುವಲ್ಲಿ ಪ್ರಯತ್ನಿಸಿಲ್ಲ. ಈ ಭಾಗದಲ್ಲಿ ಕಾಡಾನೆ ಓಡಾಡುತ್ತಿದ್ದು ಕಾಫಿ ತೋಟಗಳಲ್ಲಿ ಕಾಫಿ ಮತ್ತು ತೋಟದ ಕೆಲಸ ಮಾಡಿಸಲು ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಆತಂಕ ಹೇಳಿಕೊಂಡಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm