ಬ್ರೇಕಿಂಗ್ ನ್ಯೂಸ್
01-03-26 04:59 pm HK News Desk ಕರ್ನಾಟಕ
ಮಡಿಕೇರಿ, ಮಾರ್ಚ್ 1: ಕಾಡಾನೆ ದಾಳಿಗೆ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಬಲಿಯಾದ ಘಟನೆ ಕೊಡಗು ಜಿಲ್ಲೆಯ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ(17) ಮೃತ ದುರ್ದೈವಿ.
ಶನಿವಾರ ಸಂಜೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.
ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ ನಿನ್ನೆ ಸಂಜೆ ಕಾಲೇಜು ಮುಗಿಸಿ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಇಳಿದು ನಡೆದು ಹೋಗುತ್ತಿದ್ದಾಗ ಏಕಾಏಕಿ ಆನೆ ದಾಳಿ ನಡೆಸಿದೆ. ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.
ಆನೆ ದಾಳಿಯಿಂದ ವಿದ್ಯಾರ್ಥಿನಿ ಬಲಿಯಾಗಿದ್ದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲಾಖೆಯಿಂದ ಪರಿಹಾರ ಕೊಡುವಂತೆ ಮತ್ತು ಕಾಡಾನೆ ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ. ಬೆಟ್ಟತ್ತೂರಿನ ಸುತ್ತಮುತ್ತ ಆನೆಗಳು ಓಡಾಡುತಿದ್ದು ಆನೆ ದಾಳಿ ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಆನೆ ಮತ್ತು ಮಾನವ ಸಂಘರ್ಷ ಹೆಚ್ಚುತ್ತಿದ್ದು ಸರ್ಕಾರ ಕೂಡಲೇ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಅರಣ್ಯ ಅಧಿಕಾರಿಗಳು ಒಂದು ಬಾರಿ ಗ್ರಾಮಕ್ಕೆ ಬಂದಿದ್ದರೂ, ಆನೆಗಳನ್ನು ಓಡಿಸುವಲ್ಲಿ ಪ್ರಯತ್ನಿಸಿಲ್ಲ. ಈ ಭಾಗದಲ್ಲಿ ಕಾಡಾನೆ ಓಡಾಡುತ್ತಿದ್ದು ಕಾಫಿ ತೋಟಗಳಲ್ಲಿ ಕಾಫಿ ಮತ್ತು ತೋಟದ ಕೆಲಸ ಮಾಡಿಸಲು ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಆತಂಕ ಹೇಳಿಕೊಂಡಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm