ಬ್ರೇಕಿಂಗ್ ನ್ಯೂಸ್
01-03-26 05:16 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಮಾರ್ಚ್ 1: ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಸುದ್ದಿಯ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಶಿಯಾ ಮುಸ್ಲಿಮರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಅಘೋಷಿತ ಬಂದ್ ಆಚರಿಸಿದ್ದಾರೆ. ಜೊತೆಗೆ ಮೂರು ದಿನ ಸ್ವಯಂಪ್ರೇರಿತ ‘ಕರಾಳ ದಿನ’ ಆಚರಿಸಲು ತೀರ್ಮಾನಿಸಿದ್ದಾರೆ.
ಬೆಳಗ್ಗಿನಿಂದಲೇ ನೂರಾರು ಗ್ರಾಮಸ್ಥರು ರಸ್ತೆಗಿಳಿದು ಖಮೇನಿ ಅವರ ಭಾವಚಿತ್ರಗಳನ್ನು ಹಿಡಿದು ಕಣ್ಣೀರು ಹಾಕಿ ಶೋಕಾಚರಣೆ ನಡೆಸಿದರು. ಇರಾನ್ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಂಜುಮನ್ ಎ ಜಾಫರಿಯಾ ಸಮಿತಿ ನೇತೃತ್ವದಲ್ಲಿ ಸಂಜೆ ವೇಳೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಅಲೀಪುರ–ಇರಾನ್ ಬಾಂಧವ್ಯ
ಅಲೀಪುರ ಗ್ರಾಮಕ್ಕೆ ಇರಾನ್ ಜೊತೆಗಿನ ಧಾರ್ಮಿಕ ಮತ್ತು ಭಾವನಾತ್ಮಕ ನಂಟು ದಶಕಗಳ ಇತಿಹಾಸ ಹೊಂದಿದೆ. 1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅಲೀಪುರಕ್ಕೆ ಭೇಟಿ ನೀಡಿದ್ದರೆಂಬ ಮಾಹಿತಿ ಸ್ಥಳೀಯರಲ್ಲಿ ಇದೆ. ಅವರ ಗುರು ಅಯತೊಲ್ಲಾ ಇಮಾಮ್ ಖಮೇನಿ ಅವರ ಹೆಸರಿನಲ್ಲಿ ಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣವಾಗಿದ್ದು, ಅದರ ಉದ್ಘಾಟನೆಗೂ ಅವರು ಆಗಮಿಸಿದ್ದರು ಎನ್ನಲಾಗುತ್ತದೆ.
ಈ ಹಿಂದೆ ‘ಬೆಳ್ಳಿಕುಂಟೆ’ ಎಂದು ಕರೆಯಲ್ಪಡುತ್ತಿದ್ದ ಗ್ರಾಮವು ಬಿಜಾಪುರದ ಆದಿಲ್ಶಾಹಿಗಳ ಕಾಲದಲ್ಲಿ ವಲಸೆ ಬಂದವರಿಂದ ‘ಅಲೀಪುರ’ವಾಗಿ ರೂಪಾಂತರಗೊಂಡಿತೆಂಬ ಐತಿಹಾಸಿಕ ಉಲ್ಲೇಖವೂ ಇದೆ. ಸುಮಾರು 20 ಸಾವಿರ ಜನಸಂಖ್ಯೆಯ ಈ ಗ್ರಾಮದಲ್ಲಿ ಶಿಯಾ ಮುಸ್ಲಿಮರದ್ದೇ ಪ್ರಾಬಲ್ಯವಿದೆ. ವೈದ್ಯಕೀಯ ಹಾಗೂ ಧಾರ್ಮಿಕ ಶಿಕ್ಷಣಕ್ಕಾಗಿ ಅನೇಕರು ಇರಾನ್ ಅವಲಂಬಿಸಿಕೊಂಡಿದ್ದು, ಕೆಲವರು ಅಲ್ಲಿ ನೆಲೆಸಿದ್ದಾರೆ.
ಗ್ರಾಮದಲ್ಲಿರುವ ‘ಅಲಿ ಟಿವಿ’ ಮೂಲಕ ಖಮೇನಿ ಅವರ ಧಾರ್ಮಿಕ ಪ್ರವಚನಗಳು ಪ್ರಸಾರವಾಗುತ್ತಿದ್ದು, ಅವರ ಧಾರ್ಮಿಕ ಆದೇಶಗಳನ್ನು ಪಾಲಿಸುವ ದೊಡ್ಡ ಸಮುದಾಯವೇ ಇಲ್ಲಿದೆ. ಇರಾನ್ನಲ್ಲಿ ಯುದ್ಧ ಸಂಭವಿಸಿದಾಗಲೆಲ್ಲಾ ಅಲೀಪುರ ನಿವಾಸಿಗಳಲ್ಲಿ ಆತಂಕ ಮನೆ ಮಾಡುವುದು ಸಾಮಾನ್ಯ. ಸದ್ಯ ಖಮೇನಿ ಅವರ ಸಾವಿನ ಸುದ್ದಿಯಿಂದ ಗ್ರಾಮವೇ ಮೌನಕ್ಕೆ ಜಾರಿದ್ದು, ಭಾರೀ ಶೋಕ ವಾತಾವರಣ ಆವರಿಸಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am