ಬ್ರೇಕಿಂಗ್ ನ್ಯೂಸ್
02-03-26 09:19 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 02: ಹೊಸ ಶಿಕ್ಷಣ ನೀತಿ ಜಾರಿಗೆ ಅನುಗುಣವಾಗಿ 2025-26ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 6 ವರ್ಷ ವಯೋಮಿತಿ ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶಕ್ಕೆ ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿಗದಿತ ವಯಸ್ಸು ಪೂರೈಸದ ಮಕ್ಕಳ ಪೋಷಕರು ಬೆಂಗಳೂರಿನಲ್ಲಿ ಸೇರಿ 90 ದಿನಗಳ ಸಡಿಲಿಕೆ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
‘ಯುಕೆಜಿ ಮುಗಿದಿದೆ, 1ನೇ ತರಗತಿಗೆ ದಾರಿ ಬಿಡಿ’, ‘ಸಮಯ ವ್ಯರ್ಥ ಮಾಡಬೇಡಿ, ಕಲಿಕೆಗೆ ಅವಕಾಶ ಕೊಡಿ’, ‘ಶಿಕ್ಷಣ ನಮ್ಮ ಹಕ್ಕು, ವಯಸ್ಸು ಅಡ್ಡಿಯಾಗಬಾರದು’ ಎಂಬ ಘೋಷಣೆಗಳಿರುವ ಪ್ಲೇ ಕಾರ್ಡ್ಗಳನ್ನು ಹಿಡಿದು ಪೋಷಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
“ಇದು ಪ್ರತಿಭಟನೆ ಅಲ್ಲ, ಮನವಿ”
ಒಬ್ಬ ಪೋಷಕರ ಪ್ರಕಾರ, ಇದು ಸರ್ಕಾರ ವಿರೋಧಿ ಪ್ರತಿಭಟನೆ ಅಲ್ಲ; ಮನವಿ ಮಾತ್ರ. “ಮೂರು ವರ್ಷಗಳ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿದ ಮಕ್ಕಳನ್ನು ಪ್ರಥಮ ತರಗತಿಗೆ ದಾಖಲಿಸಬೇಕು. ಆದರೆ ಹೊಸ ಶಿಕ್ಷಣ ನೀತಿಯ ಪ್ರಕಾರ 6 ವರ್ಷ ವಯೋಮಿತಿ ಪೂರೈಸದ ಕಾರಣ ನಮ್ಮ ಮಕ್ಕಳಿಗೆ ಪ್ರವೇಶ ಸಿಗುತ್ತಿಲ್ಲ. ಈಗಿರುವ ತರಗತಿಯನ್ನು ಮತ್ತೆ ಕಲಿಸುವುದು ಮಕ್ಕಳಿಗೆ ಮಾನಸಿಕ ಒತ್ತಡ ಉಂಟುಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.
ಪೋಷಕರು ಕಳೆದ ಎರಡು ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಕೋವಿಡ್ ಅವಧಿಯಲ್ಲಿ ಹುಟ್ಟಿದ ಮಕ್ಕಳು ಈಗಾಗಲೇ ಭಾವನಾತ್ಮಕ ಮತ್ತು ಮಾನಸಿಕ ಒತ್ತಡ ಅನುಭವಿಸಿದ್ದು, ಮತ್ತೊಮ್ಮೆ ತರಗತಿ ಮರುಕಳಿಸುವುದು ಅವರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕ ವ್ಯಕ್ತವಾಗಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಮಕ್ಕಳು ಈ ಆದೇಶದಿಂದ ತೊಂದರೆಗೆ ಸಿಲುಕಿರುವುದಾಗಿ ಪೋಷಕರು ಹೇಳಿದ್ದು, ದಾಖಲಾತಿ ವಿಚಾರದಲ್ಲಿ 90 ದಿನಗಳ ವಯೋಮಿತಿ ಸಡಿಲಿಕೆ ನೀಡಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಏನಿದು ಸರ್ಕಾರದ ಆದೇಶ?
2025-26ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ ಜೂನ್ 1ರ ವೇಳೆಗೆ 6 ವರ್ಷ ಪೂರ್ಣಗೊಂಡಿರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದಂತೆ ಕನಿಷ್ಠ ವಯೋಮಿತಿಯನ್ನು 6 ವರ್ಷಗಳೆಂದು ನಿಗದಿಪಡಿಸಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm