ಬ್ರೇಕಿಂಗ್ ನ್ಯೂಸ್
02-03-26 09:19 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 02: ಹೊಸ ಶಿಕ್ಷಣ ನೀತಿ ಜಾರಿಗೆ ಅನುಗುಣವಾಗಿ 2025-26ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 6 ವರ್ಷ ವಯೋಮಿತಿ ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶಕ್ಕೆ ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿಗದಿತ ವಯಸ್ಸು ಪೂರೈಸದ ಮಕ್ಕಳ ಪೋಷಕರು ಬೆಂಗಳೂರಿನಲ್ಲಿ ಸೇರಿ 90 ದಿನಗಳ ಸಡಿಲಿಕೆ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
‘ಯುಕೆಜಿ ಮುಗಿದಿದೆ, 1ನೇ ತರಗತಿಗೆ ದಾರಿ ಬಿಡಿ’, ‘ಸಮಯ ವ್ಯರ್ಥ ಮಾಡಬೇಡಿ, ಕಲಿಕೆಗೆ ಅವಕಾಶ ಕೊಡಿ’, ‘ಶಿಕ್ಷಣ ನಮ್ಮ ಹಕ್ಕು, ವಯಸ್ಸು ಅಡ್ಡಿಯಾಗಬಾರದು’ ಎಂಬ ಘೋಷಣೆಗಳಿರುವ ಪ್ಲೇ ಕಾರ್ಡ್ಗಳನ್ನು ಹಿಡಿದು ಪೋಷಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
“ಇದು ಪ್ರತಿಭಟನೆ ಅಲ್ಲ, ಮನವಿ”
ಒಬ್ಬ ಪೋಷಕರ ಪ್ರಕಾರ, ಇದು ಸರ್ಕಾರ ವಿರೋಧಿ ಪ್ರತಿಭಟನೆ ಅಲ್ಲ; ಮನವಿ ಮಾತ್ರ. “ಮೂರು ವರ್ಷಗಳ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿದ ಮಕ್ಕಳನ್ನು ಪ್ರಥಮ ತರಗತಿಗೆ ದಾಖಲಿಸಬೇಕು. ಆದರೆ ಹೊಸ ಶಿಕ್ಷಣ ನೀತಿಯ ಪ್ರಕಾರ 6 ವರ್ಷ ವಯೋಮಿತಿ ಪೂರೈಸದ ಕಾರಣ ನಮ್ಮ ಮಕ್ಕಳಿಗೆ ಪ್ರವೇಶ ಸಿಗುತ್ತಿಲ್ಲ. ಈಗಿರುವ ತರಗತಿಯನ್ನು ಮತ್ತೆ ಕಲಿಸುವುದು ಮಕ್ಕಳಿಗೆ ಮಾನಸಿಕ ಒತ್ತಡ ಉಂಟುಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.
ಪೋಷಕರು ಕಳೆದ ಎರಡು ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಕೋವಿಡ್ ಅವಧಿಯಲ್ಲಿ ಹುಟ್ಟಿದ ಮಕ್ಕಳು ಈಗಾಗಲೇ ಭಾವನಾತ್ಮಕ ಮತ್ತು ಮಾನಸಿಕ ಒತ್ತಡ ಅನುಭವಿಸಿದ್ದು, ಮತ್ತೊಮ್ಮೆ ತರಗತಿ ಮರುಕಳಿಸುವುದು ಅವರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕ ವ್ಯಕ್ತವಾಗಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಮಕ್ಕಳು ಈ ಆದೇಶದಿಂದ ತೊಂದರೆಗೆ ಸಿಲುಕಿರುವುದಾಗಿ ಪೋಷಕರು ಹೇಳಿದ್ದು, ದಾಖಲಾತಿ ವಿಚಾರದಲ್ಲಿ 90 ದಿನಗಳ ವಯೋಮಿತಿ ಸಡಿಲಿಕೆ ನೀಡಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಏನಿದು ಸರ್ಕಾರದ ಆದೇಶ?
2025-26ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ ಜೂನ್ 1ರ ವೇಳೆಗೆ 6 ವರ್ಷ ಪೂರ್ಣಗೊಂಡಿರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದಂತೆ ಕನಿಷ್ಠ ವಯೋಮಿತಿಯನ್ನು 6 ವರ್ಷಗಳೆಂದು ನಿಗದಿಪಡಿಸಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm