ಬ್ರೇಕಿಂಗ್ ನ್ಯೂಸ್
03-03-26 08:39 pm HK News Staffer ಕರ್ನಾಟಕ
ಬೆಂಗಳೂರು, ಮಾ.3: ಐಷಾರಾಮಿ ಜೀವನ ಶೈಲಿಯಲ್ಲಿ ಕಾಣಿಸಿಕೊಂಡಿದ್ದ ಯುವಕ-ಯುವತಿಯರ ಅಸಲಿ ಮುಖವನ್ನು ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಬಯಲು ಮಾಡಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್ಮೆಂಟ್ ಒಂದರ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 10 ಕೋಟಿ ರೂ. ಮೌಲ್ಯದ ಬೃಹತ್ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿದ್ದು, ಅಂತರಾಷ್ಟ್ರೀಯ ಡ್ರಗ್ ಜಾಲದ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಬಾಗಲೂರಿನಲ್ಲಿರುವ ಪ್ರತಿಷ್ಠಿತ ಪ್ರೆಸ್ಟಿಜ್ ಫೈನ್ ಬೇರಿ ಪಾರ್ಕ್ ಅಪಾರ್ಟ್ಮೆಂಟ್ನ ಫ್ಲಾಟ್ನಲ್ಲಿ ಈ ಅಕ್ರಮ ಚಟುವಟಿಕೆ ಪತ್ತೆಯಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಪೊಲೀಸರು ಕೇರಳ ಮೂಲದ ಅಶ್ವಿನ್ (27) ಮತ್ತು ಮೊಬಿನಾ (25) ಎಂಬವರನ್ನು ಬಂಧಿಸಿದ್ದಾರೆ. ಡ್ರಗ್ ಪೆಡ್ಲಿಂಗ್ನ್ನೇ ವೃತ್ತಿಯನ್ನಾಗಿಸಿದ್ದ ಆರೋಪಿಗಳು ಯಾವುದೇ ಅನುಮಾನ ಮೂಡದಂತೆ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದು ಅಕ್ರಮ ವ್ಯವಹಾರ ನಡೆಸುತ್ತಿದ್ದರು ಎಂದು ತನಿಖೆಯಲ್ಲಿ ಗೊತ್ತಾಗಿದೆ.
ತನಿಖೆ ವೇಳೆ ಡ್ರಗ್ ಜಾಲವು ಅಂತಾರಾಷ್ಟ್ರೀಯ ಮಟ್ಟದ ಸಂಪರ್ಕ ಹೊಂದಿರುವುದು ಬೆಳಕಿಗೆ ಬಂದಿದೆ. ಥೈಲ್ಯಾಂಡ್ ಮೂಲದ ವಿನ್ಸೆಂಟ್ ಎಂಬಾತ ಈ ಜಾಲದ ಮಾಸ್ಟರ್ ಮೈಂಡ್ ಆಗಿದ್ದು, ವಿಮಾನಗಳ ಮೂಲಕ ಹಂತ ಹಂತವಾಗಿ ಡ್ರಗ್ಸ್ ಅನ್ನು ಬೆಂಗಳೂರಿಗೆ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ವಿನ್ಸೆಂಟ್ ನೀಡುತ್ತಿದ್ದ ಸೂಚನೆಗಳ ಆಧಾರದಲ್ಲಿ ಅಶ್ವಿನ್ ಮತ್ತು ಮೊಬಿನಾ ಮಾದಕ ದ್ರವ್ಯಗಳನ್ನು ಸ್ವೀಕರಿಸಿ ಗ್ರಾಹಕರಿಗೆ ತಲುಪಿಸುವ ಕಾರ್ಯ ನಡೆಸುತ್ತಿದ್ದರು.
ಕಾರ್ಯಾಚರಣೆಯಲ್ಲಿ ಪೊಲೀಸರು ಕರ್ನಾಟಕದಲ್ಲೇ ಮೊದಲ ಬಾರಿಗೆ ಭಾರೀ ಪ್ರಮಾಣದ 8,335 LSD ಸ್ಟ್ರಿಪ್ಸ್ ವಶಪಡಿಸಿದ್ದಾರೆ. ಒಂದು ಎಲ್ಎಸ್ಡಿ ಸ್ಟ್ರಿಪ್ ಬೆಲೆ ಸುಮಾರು 6,000 ರೂ. ಆಗಿದ್ದು, ಇವುಗಳನ್ನು ದೇವತೆಗಳ ಚಿತ್ರಗಳು ಹಾಗೂ ಕಲಾಕೃತಿಗಳ ರೂಪದಲ್ಲಿ ಮುದ್ರಿಸಿ ಯಾರಿಗೂ ಅನುಮಾನ ಬಾರದಂತೆ ಮಾರಾಟ ಮಾಡಲಾಗುತ್ತಿತ್ತು. ಇದರ ಜೊತೆಗೆ 534 ಗ್ರಾಂ ಚರಸ್ ಮತ್ತು 5 ಕೆಜಿ ಹೈಡ್ರೋ ಗಾಂಜಾವನ್ನೂ ಜಪ್ತಿ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ಡ್ರಗ್ ಜಾಲದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಕ್ರಮ ವ್ಯವಹಾರಕ್ಕೆ ಬಳಸಲಾದ ಫ್ಲಾಟ್ನ ಮಾಲೀಕನ ಪಾತ್ರದ ಬಗ್ಗೆ ಕೂಡ ಸಿಸಿಬಿ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm