ಬ್ರೇಕಿಂಗ್ ನ್ಯೂಸ್
04-03-26 11:51 am HK News Staffer ಕರ್ನಾಟಕ
ಚಿಕ್ಕಮಗಳೂರು,ಮಾ 04: ಇರಾನ್–ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಯುವಕನೊಬ್ಬ ಸಂಪರ್ಕಕ್ಕೆ ಸಿಗದಿರುವ ಘಟನೆ ಕುಟುಂಬವನ್ನು ಆತಂಕಕ್ಕೀಡಾಗಿಸಿದೆ. ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮದ ನಿಶ್ಚಿತ್ ಎಂಬ ಯುವಕ ಪ್ರಸ್ತುತ ಯುದ್ಧ ಪೀಡಿತ ಇರಾನ್ ಪ್ರದೇಶದಲ್ಲಿರುವ ಶಂಕೆ ವ್ಯಕ್ತವಾಗಿದ್ದು, ಕಳೆದ ಕೆಲವು ದಿನಗಳಿಂದ ಕುಟುಂಬಸ್ಥರೊಂದಿಗೆ ಸಂಪರ್ಕಕ್ಕೆ ಸಿಗುತ್ತಿಲ್ಲ. ಇದು ಕುಟುಂಬಸ್ಥರಿಗೆ ತೀವ್ರ ಚಿಂತೆ ಉಂಟು ಮಾಡಿದೆ.
ಮರ್ಚಂಟ್ ನೇವಿಯಲ್ಲಿ ವೃತ್ತಿ ಆರಂಭಿಸಿದ್ದ ನಿಶ್ಚಿತ್, ಕಳೆದ ಐದು ತಿಂಗಳ ಹಿಂದೆ ಉದ್ಯೋಗ ನಿಮಿತ್ತ ಇರಾನ್ಗೆ ತೆರಳಿದ್ದರು. ಆದರೆ ಅಮೆರಿಕ ಬೆಂಬಲಿತ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಪರಿಸ್ಥಿತಿ ಉಲ್ಬಣಗೊಂಡಿರುವ ಸಂದರ್ಭದಲ್ಲಿ ಕ್ಷಿಪಣಿ ದಾಳಿಗಳು ಮುಂದುವರಿಯುತ್ತಿರುವುದರಿಂದ ಆತನ ಸುರಕ್ಷತೆ ಬಗ್ಗೆ ಕುಟುಂಬಸ್ಥರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ.
ನಿಶ್ಚಿತ್ ಅವರ ಮೊಬೈಲ್ ಫೋನ್ ಕಳೆದ ಕೆಲವು ದಿನಗಳಿಂದ ಸ್ವಿಚ್ ಆಫ್ ಆಗಿದ್ದು, ಅವರ ಸ್ಥಿತಿಗತಿ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಗನ ಕರೆಗಾಗಿ ದಿನನಿತ್ಯ ಕಾಯುತ್ತಿರುವ ಪೋಷಕರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನೆರವಿಗಾಗಿ ಮನವಿ ಮಾಡಿದ್ದಾರೆ. ವಿದೇಶಾಂಗ ಇಲಾಖೆಯ ಮೂಲಕ ತಕ್ಷಣ ಮಾಹಿತಿ ಸಂಗ್ರಹಿಸಿ, ನಿಶ್ಚಿತ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಗ್ರಾಮದಲ್ಲಿ ಈ ಬೆಳವಣಿಗೆ ಆತಂಕದ ವಾತಾವರಣವನ್ನು ಸೃಷ್ಟಿಸಿದ್ದು, ಕುಟುಂಬದವರು ಕಣ್ಣೀರಿನ ಮನವಿ ಮಾಡಿದ್ದಾರೆ. ಪ್ರಸ್ತುತ ಜಿಲ್ಲಾಡಳಿತ ಅಥವಾ ಸ್ಥಳೀಯ ಪೊಲೀಸ್ ಇಲಾಖೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದಷ್ಟು ಬೇಗ ತಮ್ಮ ಮಗನನ್ನು ವಾಪಸ್ ಕರೆತನ್ನಿ ಎಂದು ನಿಶ್ಚಿತ್ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.
ಬದುಕು ಕಟ್ಟಿಕೊಳ್ಳಲು ಇರಾನ್ಗೆ ಹೋಗಿದ್ದ ನಿಶ್ಚಿತ್!
ಬದುಕು ಕಟ್ಟಿಕೊಳ್ಳಲು ನಿಶ್ಚಿತ್ ಇರಾನ್ಗೆ ತೆರಳಿದ್ದನಂತೆ. ಮರ್ಚೆಂಟ್ ನೇವಿ ಉದ್ಯೋಗಿಯಾಗಿದ್ದ ನಿಶ್ಚಿತ್ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದವರಾಗಿದ್ದಾರೆ. ಐದು ತಿಂಗಳ ಹಿಂದೆಷ್ಟೇ ಇರಾನ್ ನಲ್ಲಿ ಮರ್ಚೆಂಟ್ ನೇವಿಯಲ್ಲಿ ಕೆಲಸ ಶುರು ಮಾಡಿದ್ದರು.
ಒಂದು ವಾರದ ಹಿಂದೆ ಇರಾನ್ ನಿಂದ ಕುವೈಟ್ ಗೆ ತೆರಳುವುದಾಗಿ ಕೊನೆಯ ಕರೆಯಲ್ಲಿ ಹೇಳಿದ್ದ ನಿಶ್ಚಿತ್ ಬಗ್ಗೆ ಮಾಹಿತಿ ಸಿಗದೆ ಕುಟುಂಬ ಕಂಗಾಲಾಗಿದೆ. ಮಗನನ್ನು ವಾಪಸ್ ಕರೆಸಿ ಎಂದು ತಂದೆ ಮಹೇಶ್ ಕೇಳಿಕೊಳ್ತಿದ್ದಾರೆ. ನಿಶ್ಚಿತ್ ಇರಾನ್ನಲ್ಲೇ ಇದ್ದಾನಾ? ಅಥವಾ ಕುವೈಟ್ಗೆ ಹೋಗಿದ್ದಾನಾ? ಅನ್ನೋ ಯಾವ ಮಾಹಿತಿ ಇದುವರೆಗೆ ಸಿಕ್ಕಿಲ್ಲ ಎನ್ನಲಾಗ್ತಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm