ಬ್ರೇಕಿಂಗ್ ನ್ಯೂಸ್
04-03-26 01:27 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 4: ನಾಯಕತ್ವ ಬದಲಾವಣೆಯ ಕೂಗಿನ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಚ್ 10 ರಂದು ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಆಯೋಜಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 10ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಸಚಿವರು, ಶಾಸಕರಿಗೂ ಆಹ್ವಾನ ನೀಡಲಾಗಿದೆ.
ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳಲಿದೆ. ಔತಣ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸಚಿವರು, ಎಲ್ಲ ಶಾಸಕರು, ಪರಿಷತ್ ಸದಸ್ಯರು ಹಾಗೂ ಕೆಲವು ಹಿರಿಯ ನಾಯಕರಿಗೂ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿ, 6 ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ತೃಪ್ತಿ ಇದೆ. ಕಾಂಗ್ರೆಸ್ಗೆ ಶಕ್ತಿ ತುಂಬಲು ಹೊಸ ರಕ್ತ ಬರಬೇಕು. ಹೊಸಬರಿಗೆ ಅವಕಾಶ ಸಿಗಬೇಕು. ನಾನು ಸ್ಟ್ರೀಟ್ ಫೈಟರ್, ಯಾವ ರೀತಿ ಹೋರಾಟ ಮಾಡಬೇಕೆಂದು ಗೊತ್ತಿದೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಿಎಂ ಸ್ಥಾನಕ್ಕೆ ಪ್ರಬಲ ಹಕ್ಕೊತ್ತಾಯ ಮಾಡುವ ಬಗ್ಗೆಯೂ ಸುಳಿವು ನೀಡಿದ್ದಾರೆ.
ನಾನು ಸಿಎಂ ಬದಲಾವಣೆ ಆಗಬೇಕು, ದಲಿತ ಸಿಎಂ ಆಗಬೇಕು ಎಂದು ಹೇಳಿಯೇ ಇಲ್ಲ. ಆದರೆ ಗುಪ್ತ ಮಾತುಕತೆಯ ಸಂದರ್ಭದಲ್ಲಿ ನಾನೂ ಜೊತೆಗಿದ್ದೆ. ಅದರ ಬಗ್ಗೆ ಕ್ಲಾರಿಟಿ ಬೇಕಾಗಿದೆ ಎಂದು ಡಿಕೆಶಿ ಹೇಳಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ಆಕಾಂಕ್ಷೆ ತೋರಿದ್ದಾರೆ. ಸರ್ಕಾರಕ್ಕೆ ಮೂರು ವರ್ಷ ಪೂರೈಸುತ್ತಿದ್ದು ಈ ವೇಳೆ ಹೊಸ ದಾಳ ಎಸೆಯಲು ಡಿಕೆಶಿ ಸಜ್ಜಾಗಿರುವಂತಿದೆ. ಅದೇ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಾಕು, ಹೊಸ ರಕ್ತ ಬರಬೇಕು ಎಂದು ಹೇಳಿದ್ದು ಎನ್ನುವ ಮಾತುಗಳಿವೆ.
ಡಿನ್ನರ್ ಪಾರ್ಟಿ ಮೂಲಕ ಎಲ್ಲ ಹಿರಿಯ ಸಚಿವರು, ಶಾಸಕರು, ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಜೊತೆಗೆ ಎಲ್ಲರ ಒಪ್ಪಿಗೆಯ ನಾಯಕ ಎಂಬ ಸಂದೇಶವನ್ನು ಹೈಕಮಾಂಡ್ ನಾಯಕರಿಗೆ ನೀಡುವುದು ಡಿಕೆಶಿ ಅಜೆಂಡಾ ಎನ್ನಲಾಗುತ್ತಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm