ಬ್ರೇಕಿಂಗ್ ನ್ಯೂಸ್
04-03-26 01:27 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 4: ನಾಯಕತ್ವ ಬದಲಾವಣೆಯ ಕೂಗಿನ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಚ್ 10 ರಂದು ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಆಯೋಜಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 10ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಸಚಿವರು, ಶಾಸಕರಿಗೂ ಆಹ್ವಾನ ನೀಡಲಾಗಿದೆ.
ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳಲಿದೆ. ಔತಣ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸಚಿವರು, ಎಲ್ಲ ಶಾಸಕರು, ಪರಿಷತ್ ಸದಸ್ಯರು ಹಾಗೂ ಕೆಲವು ಹಿರಿಯ ನಾಯಕರಿಗೂ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿ, 6 ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ತೃಪ್ತಿ ಇದೆ. ಕಾಂಗ್ರೆಸ್ಗೆ ಶಕ್ತಿ ತುಂಬಲು ಹೊಸ ರಕ್ತ ಬರಬೇಕು. ಹೊಸಬರಿಗೆ ಅವಕಾಶ ಸಿಗಬೇಕು. ನಾನು ಸ್ಟ್ರೀಟ್ ಫೈಟರ್, ಯಾವ ರೀತಿ ಹೋರಾಟ ಮಾಡಬೇಕೆಂದು ಗೊತ್ತಿದೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಿಎಂ ಸ್ಥಾನಕ್ಕೆ ಪ್ರಬಲ ಹಕ್ಕೊತ್ತಾಯ ಮಾಡುವ ಬಗ್ಗೆಯೂ ಸುಳಿವು ನೀಡಿದ್ದಾರೆ.
ನಾನು ಸಿಎಂ ಬದಲಾವಣೆ ಆಗಬೇಕು, ದಲಿತ ಸಿಎಂ ಆಗಬೇಕು ಎಂದು ಹೇಳಿಯೇ ಇಲ್ಲ. ಆದರೆ ಗುಪ್ತ ಮಾತುಕತೆಯ ಸಂದರ್ಭದಲ್ಲಿ ನಾನೂ ಜೊತೆಗಿದ್ದೆ. ಅದರ ಬಗ್ಗೆ ಕ್ಲಾರಿಟಿ ಬೇಕಾಗಿದೆ ಎಂದು ಡಿಕೆಶಿ ಹೇಳಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ಆಕಾಂಕ್ಷೆ ತೋರಿದ್ದಾರೆ. ಸರ್ಕಾರಕ್ಕೆ ಮೂರು ವರ್ಷ ಪೂರೈಸುತ್ತಿದ್ದು ಈ ವೇಳೆ ಹೊಸ ದಾಳ ಎಸೆಯಲು ಡಿಕೆಶಿ ಸಜ್ಜಾಗಿರುವಂತಿದೆ. ಅದೇ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಾಕು, ಹೊಸ ರಕ್ತ ಬರಬೇಕು ಎಂದು ಹೇಳಿದ್ದು ಎನ್ನುವ ಮಾತುಗಳಿವೆ.
ಡಿನ್ನರ್ ಪಾರ್ಟಿ ಮೂಲಕ ಎಲ್ಲ ಹಿರಿಯ ಸಚಿವರು, ಶಾಸಕರು, ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಜೊತೆಗೆ ಎಲ್ಲರ ಒಪ್ಪಿಗೆಯ ನಾಯಕ ಎಂಬ ಸಂದೇಶವನ್ನು ಹೈಕಮಾಂಡ್ ನಾಯಕರಿಗೆ ನೀಡುವುದು ಡಿಕೆಶಿ ಅಜೆಂಡಾ ಎನ್ನಲಾಗುತ್ತಿದೆ.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am