ಬ್ರೇಕಿಂಗ್ ನ್ಯೂಸ್
04-03-26 01:27 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 4: ನಾಯಕತ್ವ ಬದಲಾವಣೆಯ ಕೂಗಿನ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಚ್ 10 ರಂದು ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಆಯೋಜಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 10ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಸಚಿವರು, ಶಾಸಕರಿಗೂ ಆಹ್ವಾನ ನೀಡಲಾಗಿದೆ.
ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳಲಿದೆ. ಔತಣ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸಚಿವರು, ಎಲ್ಲ ಶಾಸಕರು, ಪರಿಷತ್ ಸದಸ್ಯರು ಹಾಗೂ ಕೆಲವು ಹಿರಿಯ ನಾಯಕರಿಗೂ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿ, 6 ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ತೃಪ್ತಿ ಇದೆ. ಕಾಂಗ್ರೆಸ್ಗೆ ಶಕ್ತಿ ತುಂಬಲು ಹೊಸ ರಕ್ತ ಬರಬೇಕು. ಹೊಸಬರಿಗೆ ಅವಕಾಶ ಸಿಗಬೇಕು. ನಾನು ಸ್ಟ್ರೀಟ್ ಫೈಟರ್, ಯಾವ ರೀತಿ ಹೋರಾಟ ಮಾಡಬೇಕೆಂದು ಗೊತ್ತಿದೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಿಎಂ ಸ್ಥಾನಕ್ಕೆ ಪ್ರಬಲ ಹಕ್ಕೊತ್ತಾಯ ಮಾಡುವ ಬಗ್ಗೆಯೂ ಸುಳಿವು ನೀಡಿದ್ದಾರೆ.
ನಾನು ಸಿಎಂ ಬದಲಾವಣೆ ಆಗಬೇಕು, ದಲಿತ ಸಿಎಂ ಆಗಬೇಕು ಎಂದು ಹೇಳಿಯೇ ಇಲ್ಲ. ಆದರೆ ಗುಪ್ತ ಮಾತುಕತೆಯ ಸಂದರ್ಭದಲ್ಲಿ ನಾನೂ ಜೊತೆಗಿದ್ದೆ. ಅದರ ಬಗ್ಗೆ ಕ್ಲಾರಿಟಿ ಬೇಕಾಗಿದೆ ಎಂದು ಡಿಕೆಶಿ ಹೇಳಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ಆಕಾಂಕ್ಷೆ ತೋರಿದ್ದಾರೆ. ಸರ್ಕಾರಕ್ಕೆ ಮೂರು ವರ್ಷ ಪೂರೈಸುತ್ತಿದ್ದು ಈ ವೇಳೆ ಹೊಸ ದಾಳ ಎಸೆಯಲು ಡಿಕೆಶಿ ಸಜ್ಜಾಗಿರುವಂತಿದೆ. ಅದೇ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಾಕು, ಹೊಸ ರಕ್ತ ಬರಬೇಕು ಎಂದು ಹೇಳಿದ್ದು ಎನ್ನುವ ಮಾತುಗಳಿವೆ.
ಡಿನ್ನರ್ ಪಾರ್ಟಿ ಮೂಲಕ ಎಲ್ಲ ಹಿರಿಯ ಸಚಿವರು, ಶಾಸಕರು, ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಜೊತೆಗೆ ಎಲ್ಲರ ಒಪ್ಪಿಗೆಯ ನಾಯಕ ಎಂಬ ಸಂದೇಶವನ್ನು ಹೈಕಮಾಂಡ್ ನಾಯಕರಿಗೆ ನೀಡುವುದು ಡಿಕೆಶಿ ಅಜೆಂಡಾ ಎನ್ನಲಾಗುತ್ತಿದೆ.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm