ಬ್ರೇಕಿಂಗ್ ನ್ಯೂಸ್
04-03-26 05:06 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 4 : ಅತ್ತೆ ಜೊತೆ ಅಡುಗೆ ವಿಚಾರಕ್ಕೆ ನಡೆದ ಗಲಾಟೆಯಿಂದ ಮನನೊಂದು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಬ್ಬಿಗೆರೆ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು 35 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಸುಷ್ಮಾ ಎಂದು ಗುರುತಿಸಲಾಗಿದೆ. ಮೃತ ಸುಷ್ಮಾ ಈ ಹಿಂದೆ ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಐದು ವರ್ಷಗಳ ಹಿಂದೆ ಪುನೀತ್ ಕುಮಾರ್ ಅವರನ್ನು ಮದುವೆಯಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಮಗನಿದ್ದಾನೆ.
ಮನೆಯಲ್ಲಿ ಸಣ್ಣ ಸಣ್ಣ ಕಾರಣಗಳಿಗೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಮಂಗಳವಾರ ಸುಷ್ಮಾ ಅವರು ಅತ್ತೆ ಕಲ್ಪನಾ ಅವರೊಂದಿಗೆ ಅಡುಗೆ ಮಾಡುವ ವಿಚಾರದಲ್ಲಿ ಜಗಳವಾಡಿದ್ದು ಎರಡೂ ಕಡೆಯಿಂದ ಬೈದಾಟ ನಡೆದಿತ್ತು. ಇದೇ ಕಾರಣಕ್ಕೆ ಮನನೊಂದು ಸುಷ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ತೆ ಅಡುಗೆ ಮಾಡುವ ಸಂದರ್ಭದಲ್ಲಿ ವಿನಾಕಾರಣ ಅಡ್ಡಿ ಪಡಿಸುತ್ತಿದ್ದರು ಹಾಗೂ ಕಿರುಕುಳ ನೀಡುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಸುಷ್ಮಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಷ್ಮಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಸುಷ್ಮಾ ಕುಟುಂಬಸ್ಥರು ನೀಡಿದ ದೂರಿನಂತೆ ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಪೊಲೀಸರು ಸುಷ್ಮಾ ಅವರ ಪತಿ ಪುನೀತ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಅತ್ತೆ ಕಲ್ಪನಾ ನಾಪತ್ತೆಯಾಗಿದ್ದು ಅವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm