ಬ್ರೇಕಿಂಗ್ ನ್ಯೂಸ್
05-03-26 09:40 pm HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 5 : ಪಶ್ಚಿಮ ಏಷ್ಯಾ ಮತ್ತು ಉಕ್ರೇನ್ ಸಂಘರ್ಷಗಳಿಗೆ "ತ್ವರಿತ ಅಂತ್ಯ" ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಯಾವುದೇ ಸಮಸ್ಯೆಯನ್ನು ಸೇನಾ ಸಂಘರ್ಷದ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.
"ಭಾರತ ಮತ್ತು ಫಿನ್ ಲ್ಯಾಂಡ್ ಎರಡೂ ರಾಷ್ಟ್ರಗಳು ಕಾನೂನು, ದ್ವಿಪಕ್ಷಿಯ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ನಂಬುತ್ತವೆ. ಯಾವುದೇ ಸಮಸ್ಯೆಯನ್ನು ಮಿಲಿಟರಿ ಸಂಘರ್ಷದಿಂದ ಪರಿಹರಿಸಲು ಸಾಧ್ಯವಿಲ್ಲ ಎಂಬುದನ್ನು ನಾವು ಒಪ್ಪುತ್ತೇವೆ" ಎಂದು ಅವರು ಹೇಳಿದರು.
"ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾ ಆಗಿರಲಿ, ಸಂಘರ್ಷಗಳು ತ್ವರಿತ ಅಂತ್ಯ ಕಾಣಬೇಕು ಮತ್ತು ಶಾಂತಿಗಾಗಿ ಪ್ರತಿಯೊಂದು ಪ್ರಯತ್ನವನ್ನು ಬೆಂಬಲಿಸುವುದನ್ನು ನಾವು ಮುಂದುವರಿಸುತ್ತೇವೆ" ಎಂದು ಪ್ರಧಾನಿ ಮೋದಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ-ಫಿನ್ಲ್ಯಾಂಡ್ ಸಂಬಂಧವನ್ನು ಡಿಜಿಟಲೀಕರಣ ಮತ್ತು ಸುಸ್ಥಿರತೆ ಕ್ಷೇತ್ರದಲ್ಲಿ ವ್ಯೂಹಾತ್ಮಕ ಪಾಲುದಾರಿಕೆಗೆ ಏರಿಸಲು ಉಭಯ ನಾಯಕರು ಒಪ್ಪಂದ ಮಾಡಿಕೊಂಡರು. "AI ನಿಂದ 6G ಟೆಲಿಕಾಂ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್ ವರೆಗಿನ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ" ಎಂದು ಅವರು ಹೇಳಿದರು.
ಭಾರತ ಮತ್ತು ಯುರೋಪಿಯನ್ ಯೂನಿಯನ್(ಇಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಮೋದಿ ಇದೇ ವೇಳೆ ಹೇಳಿದರು. "ಈ ಒಪ್ಪಂದವು ಭಾರತ ಮತ್ತು ಫಿನ್ಲ್ಯಾಂಡ್ ನಡುವಿನ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಅವರು ತಿಳಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm