ಬ್ರೇಕಿಂಗ್ ನ್ಯೂಸ್
05-03-26 09:40 pm HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 5 : ಪಶ್ಚಿಮ ಏಷ್ಯಾ ಮತ್ತು ಉಕ್ರೇನ್ ಸಂಘರ್ಷಗಳಿಗೆ "ತ್ವರಿತ ಅಂತ್ಯ" ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಯಾವುದೇ ಸಮಸ್ಯೆಯನ್ನು ಸೇನಾ ಸಂಘರ್ಷದ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.
"ಭಾರತ ಮತ್ತು ಫಿನ್ ಲ್ಯಾಂಡ್ ಎರಡೂ ರಾಷ್ಟ್ರಗಳು ಕಾನೂನು, ದ್ವಿಪಕ್ಷಿಯ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ನಂಬುತ್ತವೆ. ಯಾವುದೇ ಸಮಸ್ಯೆಯನ್ನು ಮಿಲಿಟರಿ ಸಂಘರ್ಷದಿಂದ ಪರಿಹರಿಸಲು ಸಾಧ್ಯವಿಲ್ಲ ಎಂಬುದನ್ನು ನಾವು ಒಪ್ಪುತ್ತೇವೆ" ಎಂದು ಅವರು ಹೇಳಿದರು.
"ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾ ಆಗಿರಲಿ, ಸಂಘರ್ಷಗಳು ತ್ವರಿತ ಅಂತ್ಯ ಕಾಣಬೇಕು ಮತ್ತು ಶಾಂತಿಗಾಗಿ ಪ್ರತಿಯೊಂದು ಪ್ರಯತ್ನವನ್ನು ಬೆಂಬಲಿಸುವುದನ್ನು ನಾವು ಮುಂದುವರಿಸುತ್ತೇವೆ" ಎಂದು ಪ್ರಧಾನಿ ಮೋದಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ-ಫಿನ್ಲ್ಯಾಂಡ್ ಸಂಬಂಧವನ್ನು ಡಿಜಿಟಲೀಕರಣ ಮತ್ತು ಸುಸ್ಥಿರತೆ ಕ್ಷೇತ್ರದಲ್ಲಿ ವ್ಯೂಹಾತ್ಮಕ ಪಾಲುದಾರಿಕೆಗೆ ಏರಿಸಲು ಉಭಯ ನಾಯಕರು ಒಪ್ಪಂದ ಮಾಡಿಕೊಂಡರು. "AI ನಿಂದ 6G ಟೆಲಿಕಾಂ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್ ವರೆಗಿನ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ" ಎಂದು ಅವರು ಹೇಳಿದರು.
ಭಾರತ ಮತ್ತು ಯುರೋಪಿಯನ್ ಯೂನಿಯನ್(ಇಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಮೋದಿ ಇದೇ ವೇಳೆ ಹೇಳಿದರು. "ಈ ಒಪ್ಪಂದವು ಭಾರತ ಮತ್ತು ಫಿನ್ಲ್ಯಾಂಡ್ ನಡುವಿನ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಅವರು ತಿಳಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm