ಬ್ರೇಕಿಂಗ್ ನ್ಯೂಸ್
05-03-26 09:40 pm HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 5 : ಪಶ್ಚಿಮ ಏಷ್ಯಾ ಮತ್ತು ಉಕ್ರೇನ್ ಸಂಘರ್ಷಗಳಿಗೆ "ತ್ವರಿತ ಅಂತ್ಯ" ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಯಾವುದೇ ಸಮಸ್ಯೆಯನ್ನು ಸೇನಾ ಸಂಘರ್ಷದ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.
"ಭಾರತ ಮತ್ತು ಫಿನ್ ಲ್ಯಾಂಡ್ ಎರಡೂ ರಾಷ್ಟ್ರಗಳು ಕಾನೂನು, ದ್ವಿಪಕ್ಷಿಯ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ನಂಬುತ್ತವೆ. ಯಾವುದೇ ಸಮಸ್ಯೆಯನ್ನು ಮಿಲಿಟರಿ ಸಂಘರ್ಷದಿಂದ ಪರಿಹರಿಸಲು ಸಾಧ್ಯವಿಲ್ಲ ಎಂಬುದನ್ನು ನಾವು ಒಪ್ಪುತ್ತೇವೆ" ಎಂದು ಅವರು ಹೇಳಿದರು.
"ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾ ಆಗಿರಲಿ, ಸಂಘರ್ಷಗಳು ತ್ವರಿತ ಅಂತ್ಯ ಕಾಣಬೇಕು ಮತ್ತು ಶಾಂತಿಗಾಗಿ ಪ್ರತಿಯೊಂದು ಪ್ರಯತ್ನವನ್ನು ಬೆಂಬಲಿಸುವುದನ್ನು ನಾವು ಮುಂದುವರಿಸುತ್ತೇವೆ" ಎಂದು ಪ್ರಧಾನಿ ಮೋದಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ-ಫಿನ್ಲ್ಯಾಂಡ್ ಸಂಬಂಧವನ್ನು ಡಿಜಿಟಲೀಕರಣ ಮತ್ತು ಸುಸ್ಥಿರತೆ ಕ್ಷೇತ್ರದಲ್ಲಿ ವ್ಯೂಹಾತ್ಮಕ ಪಾಲುದಾರಿಕೆಗೆ ಏರಿಸಲು ಉಭಯ ನಾಯಕರು ಒಪ್ಪಂದ ಮಾಡಿಕೊಂಡರು. "AI ನಿಂದ 6G ಟೆಲಿಕಾಂ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್ ವರೆಗಿನ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ" ಎಂದು ಅವರು ಹೇಳಿದರು.
ಭಾರತ ಮತ್ತು ಯುರೋಪಿಯನ್ ಯೂನಿಯನ್(ಇಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಮೋದಿ ಇದೇ ವೇಳೆ ಹೇಳಿದರು. "ಈ ಒಪ್ಪಂದವು ಭಾರತ ಮತ್ತು ಫಿನ್ಲ್ಯಾಂಡ್ ನಡುವಿನ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಅವರು ತಿಳಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm